ಬಿಳಿಕ ಮಾತನಾಡಿದ ರಾಜೂಗೌಡ ಮಾತನಾಡ, ‘ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಮತ್ತೆ ಒಳ್ಳೆಯ ಸಮಯ ನೋಡಿಕೊಂಡು ಕಾರ್ಯಕರ್ತರೊಂದಿಗೆ ಆಗಮಿಸಿ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸುತ್ತೇನೆ’ ಎಂದು ತಿಳಿಸಿದರು.
‘ನಾನು ಈ ಚುನಾವಣೆ ಬಯಸಿರಲಿಲ್ಲ. ದೇವರೇ ಅವಕಾಶ ತಂದುಕೊಟ್ಟಿದ್ದಾನೆ ಎಂದು ಭಾವಿಸುತ್ತೇನೆ. ಕ್ಷೇತ್ರದ ಜನ ಅನುಕಂಪಕ್ಕೆ ಮರುಳಾಗುವುದಿಲ್ಲ. ಅಭಿವೃದ್ದಿ ಕೈ ಹಿಡಿಯುತ್ತಾರೆ ಎಂಬ ಭರವಸೆ ಇದೆ’ ಎಂದರು.
ಸುರಪುರದಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ರಾಜೂಗೌಡ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿ ಹೊರ ಬರುತ್ತಿರುವುದು