<p><strong>ಸುರಪುರ:</strong> ರಾಜ್ಯ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ತಾಲ್ಲೂಕು ಕಾನೂನು ಸೇವಾ ಸಮಿತಿಯಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ.</p><p><br> ಜನ ಸಮಾನ್ಯರಿಗೆ ತ್ವರಿತ ನ್ಯಾಯದಾನ ಪರಿಕಲ್ಪನೆ ಅಡಿಯಲ್ಲಿ ನ್ಯಾಯಾಂಗ ಇಲಾಖೆ ಕರ್ತವ್ಯ ನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಕೆಲಸ ಮಾಡಲು ಈ ನೇಮಕಾತಿ ನಡೆದಿದೆ.</p>.<p>ನಿವೃತ್ತ ಸರ್ಕಾರಿ ನೌಕರರು, ಹಿರಿಯ ನಾಗರಿಕರು, ಎಂಎಸ್ಡಬ್ಲ್ಯು, ಕಾನೂನು ಪದವೀಧರರು, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ರಾಜಕೀಯೇತರ ಸದಸ್ಯರು, ಎನ್ಜಿಒ ಸದಸ್ಯರು, ಸ್ವಸಹಾಯ ಗುಂಪಿನ ಸದಸ್ಯರು ಸೇರಿದಂತೆ ಉತ್ತಮ ನಡತೆಯುಳ್ಳ ವಿದ್ಯಾವಂತರು ಅರ್ಜಿ ಸಲ್ಲಿಸಬಹುದು. </p>.<p>ಆಸಕ್ತರು ತಾಲೂಕು ಕಾನೂನು ಸೇವಾ ಸಮಿತಿ ಕಚೇರಿಯಲ್ಲಿ ಅರ್ಜಿ ಪಡೆಯಬಹುದು. ಅರ್ಜಿ ಸಲ್ಲಿಸಲು ಜುಲೈ 25 ಸಂಜೆ 5 ಗಂಟೆಯವರೆಗೆ ಕೊನೆ ದಿನವಾಗಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ನೇಮಕಾತಿಯಲ್ಲಿ ಮೀಸಲಾತಿ ಅನುಸರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ರಾಜ್ಯ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ತಾಲ್ಲೂಕು ಕಾನೂನು ಸೇವಾ ಸಮಿತಿಯಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ.</p><p><br> ಜನ ಸಮಾನ್ಯರಿಗೆ ತ್ವರಿತ ನ್ಯಾಯದಾನ ಪರಿಕಲ್ಪನೆ ಅಡಿಯಲ್ಲಿ ನ್ಯಾಯಾಂಗ ಇಲಾಖೆ ಕರ್ತವ್ಯ ನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಕೆಲಸ ಮಾಡಲು ಈ ನೇಮಕಾತಿ ನಡೆದಿದೆ.</p>.<p>ನಿವೃತ್ತ ಸರ್ಕಾರಿ ನೌಕರರು, ಹಿರಿಯ ನಾಗರಿಕರು, ಎಂಎಸ್ಡಬ್ಲ್ಯು, ಕಾನೂನು ಪದವೀಧರರು, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ರಾಜಕೀಯೇತರ ಸದಸ್ಯರು, ಎನ್ಜಿಒ ಸದಸ್ಯರು, ಸ್ವಸಹಾಯ ಗುಂಪಿನ ಸದಸ್ಯರು ಸೇರಿದಂತೆ ಉತ್ತಮ ನಡತೆಯುಳ್ಳ ವಿದ್ಯಾವಂತರು ಅರ್ಜಿ ಸಲ್ಲಿಸಬಹುದು. </p>.<p>ಆಸಕ್ತರು ತಾಲೂಕು ಕಾನೂನು ಸೇವಾ ಸಮಿತಿ ಕಚೇರಿಯಲ್ಲಿ ಅರ್ಜಿ ಪಡೆಯಬಹುದು. ಅರ್ಜಿ ಸಲ್ಲಿಸಲು ಜುಲೈ 25 ಸಂಜೆ 5 ಗಂಟೆಯವರೆಗೆ ಕೊನೆ ದಿನವಾಗಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ನೇಮಕಾತಿಯಲ್ಲಿ ಮೀಸಲಾತಿ ಅನುಸರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>