<p><strong>ಸುರಪುರ: ‘</strong>ಸಂಗೀತವು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ಒತ್ತಡ ಕಡಿಮೆ ಮಾಡಿ ನೆಮ್ಮದಿಯನ್ನು ನೀಡುತ್ತದೆ’ ಎಂದು ಸುಗೂರೇಶ್ವರ ದೇವಸ್ಥಾನದ ಸಂಸ್ಥಾಪಕ ವಂಶಜ ಸುನೀಲ್ ಸರಪಟ್ಟಣಶೆಟ್ಟಿ ಹೇಳಿದರು.</p>.<p>ಇಲ್ಲಿಯ ಸುಗೂರೇಶ್ವರ ದೇವಸ್ಥಾನದಲ್ಲಿ ಸುಗೂರೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ಮಂಗಳವಾರ ಏರ್ಪಡಿಸಿದ್ದ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸುಗೂರೇಶ್ವರ ದೇವರು ಭಕ್ತರಿಗೆ ಬೇಡಿದ್ದನ್ನು ಕೊಡುವ ಕಾಮಧೇನು ಕಲ್ಪವೃಕ್ಷವಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಸಂಗೀತ ಕಾರ್ಯಕ್ರಮ ನಡೆಯುತ್ತಿರುವುದು ಪ್ರಶಂಸನೀಯ’ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶರಣಬಸವ ಯಾಳವಾರ ಮಾತನಾಡಿ, ‘ಸಂಗೀತವು ಸ್ವರ, ಲಯ, ತಾಳ ನಿಯಮಕ್ಕನುಸಾರವಾಗಿ ಧ್ವನಿ ಅಥವಾ ನಾದದ ಆಕರ್ಷಕ ಮತ್ತು ಮನೋರಂಜನೆಯ ರೂಪವಾಗಿದೆ’ ಎಂದರು.</p>.<p>ಸಂಗೀತ ಕಲಾವಿದ ದೀಪಕ್ ಸಿಂಗ್ ಹಜೇರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಸಂಗೀತವು ಜೀವನದ ಅತ್ಮವಾಗಿದೆ ಮತ್ತು ನಮಗೆ ಅಪಾರ ಶಾಂತಿಯನ್ನು ನೀಡುತ್ತದೆ. ಸಂಗೀತವು ಸರಿಗಮ ರಾಗಗಳು, ತಾಳಗಳು ಇತ್ಯಾದಿಗಳನ್ನು ಒಳಗೊಂಡಿದೆ. ಪಂಡಿತ ಪ್ರಭುದೇವ ಸಾಲಿಮಠ ಗವಾಯಿಗಳವರು ಸಂಗೀತ ಸೇವೆ ಸಲ್ಲಿಸಿದ ಈ ಸ್ಥಳದಲ್ಲಿ ಸಂಗೀತ ಸೇವೆ ಸಲ್ಲಿಸುವುದು ನಮ್ಮ ಸೌಭಾಗ್ಯವಾಗಿದೆ’ ಎಂದರು.</p>.<p>ದೇವಸ್ಥಾನದ ಅರ್ಚಕ ಕೊಟ್ರಯ್ಯಸ್ವಾಮಿ ಬಳ್ಳುಂಡಗಿ ಸಾನ್ನಿಧ್ಯ ವಹಿಸಿದ್ದರು. ಶಿವಶರಣಯ್ಯಸ್ವಾಮಿ ಬಳ್ಳುಂಡಗಿಮಠ, ಶಂಕರಯ್ಯ ಚಿಕ್ಕಮಠ ಗೊಬ್ಬೂರ, ಪಿಎಸ್ಐ ಸಿದ್ದಣ್ಣ ಯಡ್ರಾಮಿ, ಸಿದ್ದಲಿಂಗಯ್ಯಸ್ವಾಮಿ ಕಡ್ಲಪ್ಪಮಠ ವೇದಿಕೆಯಲ್ಲಿದ್ದರು.</p>.<p>ಅನೇಕ ಸಂಗೀತ ಕಲಾವಿದರು ಅಹೋರಾತ್ರಿ ಜರುಗಿದ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಿಧ ಹಾಡುಗಳನ್ನು ಪ್ರಸ್ತುತ ಪಡಿಸಿ ಸಭಿಕರನ್ನು ರಂಜಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ: ‘</strong>ಸಂಗೀತವು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ಒತ್ತಡ ಕಡಿಮೆ ಮಾಡಿ ನೆಮ್ಮದಿಯನ್ನು ನೀಡುತ್ತದೆ’ ಎಂದು ಸುಗೂರೇಶ್ವರ ದೇವಸ್ಥಾನದ ಸಂಸ್ಥಾಪಕ ವಂಶಜ ಸುನೀಲ್ ಸರಪಟ್ಟಣಶೆಟ್ಟಿ ಹೇಳಿದರು.</p>.<p>ಇಲ್ಲಿಯ ಸುಗೂರೇಶ್ವರ ದೇವಸ್ಥಾನದಲ್ಲಿ ಸುಗೂರೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ಮಂಗಳವಾರ ಏರ್ಪಡಿಸಿದ್ದ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸುಗೂರೇಶ್ವರ ದೇವರು ಭಕ್ತರಿಗೆ ಬೇಡಿದ್ದನ್ನು ಕೊಡುವ ಕಾಮಧೇನು ಕಲ್ಪವೃಕ್ಷವಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಸಂಗೀತ ಕಾರ್ಯಕ್ರಮ ನಡೆಯುತ್ತಿರುವುದು ಪ್ರಶಂಸನೀಯ’ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶರಣಬಸವ ಯಾಳವಾರ ಮಾತನಾಡಿ, ‘ಸಂಗೀತವು ಸ್ವರ, ಲಯ, ತಾಳ ನಿಯಮಕ್ಕನುಸಾರವಾಗಿ ಧ್ವನಿ ಅಥವಾ ನಾದದ ಆಕರ್ಷಕ ಮತ್ತು ಮನೋರಂಜನೆಯ ರೂಪವಾಗಿದೆ’ ಎಂದರು.</p>.<p>ಸಂಗೀತ ಕಲಾವಿದ ದೀಪಕ್ ಸಿಂಗ್ ಹಜೇರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಸಂಗೀತವು ಜೀವನದ ಅತ್ಮವಾಗಿದೆ ಮತ್ತು ನಮಗೆ ಅಪಾರ ಶಾಂತಿಯನ್ನು ನೀಡುತ್ತದೆ. ಸಂಗೀತವು ಸರಿಗಮ ರಾಗಗಳು, ತಾಳಗಳು ಇತ್ಯಾದಿಗಳನ್ನು ಒಳಗೊಂಡಿದೆ. ಪಂಡಿತ ಪ್ರಭುದೇವ ಸಾಲಿಮಠ ಗವಾಯಿಗಳವರು ಸಂಗೀತ ಸೇವೆ ಸಲ್ಲಿಸಿದ ಈ ಸ್ಥಳದಲ್ಲಿ ಸಂಗೀತ ಸೇವೆ ಸಲ್ಲಿಸುವುದು ನಮ್ಮ ಸೌಭಾಗ್ಯವಾಗಿದೆ’ ಎಂದರು.</p>.<p>ದೇವಸ್ಥಾನದ ಅರ್ಚಕ ಕೊಟ್ರಯ್ಯಸ್ವಾಮಿ ಬಳ್ಳುಂಡಗಿ ಸಾನ್ನಿಧ್ಯ ವಹಿಸಿದ್ದರು. ಶಿವಶರಣಯ್ಯಸ್ವಾಮಿ ಬಳ್ಳುಂಡಗಿಮಠ, ಶಂಕರಯ್ಯ ಚಿಕ್ಕಮಠ ಗೊಬ್ಬೂರ, ಪಿಎಸ್ಐ ಸಿದ್ದಣ್ಣ ಯಡ್ರಾಮಿ, ಸಿದ್ದಲಿಂಗಯ್ಯಸ್ವಾಮಿ ಕಡ್ಲಪ್ಪಮಠ ವೇದಿಕೆಯಲ್ಲಿದ್ದರು.</p>.<p>ಅನೇಕ ಸಂಗೀತ ಕಲಾವಿದರು ಅಹೋರಾತ್ರಿ ಜರುಗಿದ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಿಧ ಹಾಡುಗಳನ್ನು ಪ್ರಸ್ತುತ ಪಡಿಸಿ ಸಭಿಕರನ್ನು ರಂಜಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>