<p><strong>ಸುರಪುರ:</strong> ‘ಇಲ್ಲಿಯ ಬಿ.ಆರ್.ಅಂಬೇಡ್ಕರ್ ನಗರದಲ್ಲಿ ಮೇ.24 ರಂದು ಅಂಬೇಡ್ಕರ್ ಪುತ್ಥಳಿ ಅನಾವರಣ ಹಾಗೂ ಸಾಮೂಹಿಕ ವಿವಾಹ ವಿಶೇಷ ಕಾರ್ಯಕ್ರಮಕ್ಕೆ ರಾಜ್ಯದ ಪ್ರಮುಖ ಸಚಿವರಿಗೆ ಬೆಂಗಳೂರಿನಲ್ಲಿ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿ ಆಮಂತ್ರಣ ಪತ್ರಿಕೆ ನೀಡಲಾಗಿದೆ’ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ರಾಜ್ಯ ಸಮಿತಿ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಕ್ರಾಂತಿ ತಿಳಿಸಿದ್ದಾರೆ.</p>.<p>‘ಐದುವರೆ ಅಡಿ ಎತ್ತರದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಅನಾವರಣ ಗೊಳಿಸಲಾಗುವುದು ಮತ್ತು ಬೌದ್ಧ ಧರ್ಮದ ವಿಧಿ ವಿಧಾನಗಳ ಪ್ರಕಾರ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನೂ ಕೂಡ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ, ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಅವರಿಗೆ ಬೆಂಗಳೂರಿನಲ್ಲಿ ಆಮಂತ್ರಣ ಪತ್ರಿಕೆಯನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೋರಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ನಿಯೋಗದಲ್ಲಿ ನಮ್ಮ ಸಮಿತಿಯ ರಾಜ್ಯ ಸಂಚಾಲಕ ಅರ್ಜುನ ಭದ್ರೆ, ಭಾರತೀಯ ಬೌದ್ಧ ಮಹಾಸಭಾದ ರಾಜ್ಯ ಯುವ ಘಟಕದ ಅಧ್ಯಕ್ಷ ದರ್ಶನ್ ಬಿ.ಸೋಮಶೇಖರ, ಉಪಾಸಕರಾದ ಚಂದ್ರಶೇಖರ ಕಟ್ಟಿಮನಿ, ಸಿದ್ದಣ್ಣ ಸುರಪುರಕರ್, ಮೂರ್ತಿ ಬೊಮ್ಮನಳ್ಳಿ, ಶರಣು ಚಲುವಾದಿ ಹಸನಾಪುರ, ರವಿಚಂದ್ರ ಬೊಮ್ಮನಳ್ಳಿ, ಬಸವರಾಜ ಸೇರಿ ಇತರರಿದ್ದರು’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ‘ಇಲ್ಲಿಯ ಬಿ.ಆರ್.ಅಂಬೇಡ್ಕರ್ ನಗರದಲ್ಲಿ ಮೇ.24 ರಂದು ಅಂಬೇಡ್ಕರ್ ಪುತ್ಥಳಿ ಅನಾವರಣ ಹಾಗೂ ಸಾಮೂಹಿಕ ವಿವಾಹ ವಿಶೇಷ ಕಾರ್ಯಕ್ರಮಕ್ಕೆ ರಾಜ್ಯದ ಪ್ರಮುಖ ಸಚಿವರಿಗೆ ಬೆಂಗಳೂರಿನಲ್ಲಿ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿ ಆಮಂತ್ರಣ ಪತ್ರಿಕೆ ನೀಡಲಾಗಿದೆ’ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ರಾಜ್ಯ ಸಮಿತಿ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಕ್ರಾಂತಿ ತಿಳಿಸಿದ್ದಾರೆ.</p>.<p>‘ಐದುವರೆ ಅಡಿ ಎತ್ತರದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಅನಾವರಣ ಗೊಳಿಸಲಾಗುವುದು ಮತ್ತು ಬೌದ್ಧ ಧರ್ಮದ ವಿಧಿ ವಿಧಾನಗಳ ಪ್ರಕಾರ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನೂ ಕೂಡ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ, ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಅವರಿಗೆ ಬೆಂಗಳೂರಿನಲ್ಲಿ ಆಮಂತ್ರಣ ಪತ್ರಿಕೆಯನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೋರಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ನಿಯೋಗದಲ್ಲಿ ನಮ್ಮ ಸಮಿತಿಯ ರಾಜ್ಯ ಸಂಚಾಲಕ ಅರ್ಜುನ ಭದ್ರೆ, ಭಾರತೀಯ ಬೌದ್ಧ ಮಹಾಸಭಾದ ರಾಜ್ಯ ಯುವ ಘಟಕದ ಅಧ್ಯಕ್ಷ ದರ್ಶನ್ ಬಿ.ಸೋಮಶೇಖರ, ಉಪಾಸಕರಾದ ಚಂದ್ರಶೇಖರ ಕಟ್ಟಿಮನಿ, ಸಿದ್ದಣ್ಣ ಸುರಪುರಕರ್, ಮೂರ್ತಿ ಬೊಮ್ಮನಳ್ಳಿ, ಶರಣು ಚಲುವಾದಿ ಹಸನಾಪುರ, ರವಿಚಂದ್ರ ಬೊಮ್ಮನಳ್ಳಿ, ಬಸವರಾಜ ಸೇರಿ ಇತರರಿದ್ದರು’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>