<p>ಸುರಪುರ: ‘ಘನ ಘೋರ ತಪಸ್ಸಿನಿಂದ ಗಂಗೆಯನ್ನು ಧರೆಗಿಳಿಸಿ ಮಾನವ ಜನಾಂಗವನ್ನು ಉದ್ಧರಿಸಿದ ಶ್ರೇಯಸ್ಸು ಭಗೀರಥ ಮಹರ್ಷಿಗಳದ್ದು. ಎಷ್ಟೇ ಕಷ್ಟದ ಕೆಲಸವಾದರೂ ದೃಢಸಂಕಲ್ಪ ಮತ್ತು ಶ್ರಮವಿದ್ದರೆ ಅದನ್ನು ಸಾಧಿಸಬಹುದು ಎನ್ನುವುದು ಅವರ ಜೀವನದಿಂದ ನಾವು ಕಲಿಯಬೇಕಾದ ಪಾಠವಾಗಿದೆ’ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.</p>.<p>ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಗುರುವಾರ ಹಮ್ಮಿಕೊಂಡಿದ್ದ ಮಹರ್ಷಿ ಭಗೀರಥ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಾನ್ ತಪಸ್ವಿ, ರಾಜಋಷಿ ಭಗೀರಥ ಮಹರ್ಷಿ ಅವರ ತ್ಯಾಗ, ಸಮರ್ಪಣೆ ಮತ್ತು ಆದರ್ಶಗಳು ಪ್ರತಿಯೊಬ್ಬರ ಜೀವನಕ್ಕೆ ಸದಾ ಪ್ರೇರಣೆಯಾಗಿವೆ. ಅವರು ಛಲ ಮತ್ತು ದೃಢಸಂಕಲ್ಪದ ಪ್ರತೀಕವಾಗಿದ್ದಾರೆ’ ಎಂದರು.</p>.<p>ಖಾನಾಪುರ ಎಸ್ಎಚ್ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಬಸವರಾಜ ದೋರನಹಳ್ಳಿ ರುಕ್ಮಾಪುರ ವಿಶೇಷ ಉಪನ್ಯಾಸ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಎಚ್.ಎ. ಸರಕಾವಸ್ ಮಾತನಾಡಿದರು. ಟಿಎಚ್ಒ ಡಾ.ಆರ್.ವಿ.ನಾಯಕ, ಭಗೀರಥ ಸಮಾಜದ ಅಧ್ಯಕ್ಷ ಮಾನಪ್ಪ ಗೋನಾಲ ವೇದಿಕೆಯಲ್ಲಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜ ಬಾಂಧವರಿಗೂ ಮತ್ತು ವಿವಿಧ ಸಂಘ-ಸಂಘ ಸಂಸ್ಥೆಗಳ ಸಾಧಕರಿಗೆ ಸನ್ಮಾನಿಸಿ ಗೌರವಿಸಿದರು.</p>.<p>ಶಿಕ್ಷಕರಾದ ಶರಣಬಸವ ಗೋನಾಲ ಸ್ವಾಗತಿಸಿದರು. ಮಹಾದೇವಪ್ಪ ಗುತ್ತೇದಾರ್ ನಿರೂಪಿಸಿದರು. ಸಿದ್ದಣ್ಣ ಸಾಲಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-30-1356167226</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಪುರ: ‘ಘನ ಘೋರ ತಪಸ್ಸಿನಿಂದ ಗಂಗೆಯನ್ನು ಧರೆಗಿಳಿಸಿ ಮಾನವ ಜನಾಂಗವನ್ನು ಉದ್ಧರಿಸಿದ ಶ್ರೇಯಸ್ಸು ಭಗೀರಥ ಮಹರ್ಷಿಗಳದ್ದು. ಎಷ್ಟೇ ಕಷ್ಟದ ಕೆಲಸವಾದರೂ ದೃಢಸಂಕಲ್ಪ ಮತ್ತು ಶ್ರಮವಿದ್ದರೆ ಅದನ್ನು ಸಾಧಿಸಬಹುದು ಎನ್ನುವುದು ಅವರ ಜೀವನದಿಂದ ನಾವು ಕಲಿಯಬೇಕಾದ ಪಾಠವಾಗಿದೆ’ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.</p>.<p>ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಗುರುವಾರ ಹಮ್ಮಿಕೊಂಡಿದ್ದ ಮಹರ್ಷಿ ಭಗೀರಥ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಾನ್ ತಪಸ್ವಿ, ರಾಜಋಷಿ ಭಗೀರಥ ಮಹರ್ಷಿ ಅವರ ತ್ಯಾಗ, ಸಮರ್ಪಣೆ ಮತ್ತು ಆದರ್ಶಗಳು ಪ್ರತಿಯೊಬ್ಬರ ಜೀವನಕ್ಕೆ ಸದಾ ಪ್ರೇರಣೆಯಾಗಿವೆ. ಅವರು ಛಲ ಮತ್ತು ದೃಢಸಂಕಲ್ಪದ ಪ್ರತೀಕವಾಗಿದ್ದಾರೆ’ ಎಂದರು.</p>.<p>ಖಾನಾಪುರ ಎಸ್ಎಚ್ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಬಸವರಾಜ ದೋರನಹಳ್ಳಿ ರುಕ್ಮಾಪುರ ವಿಶೇಷ ಉಪನ್ಯಾಸ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಎಚ್.ಎ. ಸರಕಾವಸ್ ಮಾತನಾಡಿದರು. ಟಿಎಚ್ಒ ಡಾ.ಆರ್.ವಿ.ನಾಯಕ, ಭಗೀರಥ ಸಮಾಜದ ಅಧ್ಯಕ್ಷ ಮಾನಪ್ಪ ಗೋನಾಲ ವೇದಿಕೆಯಲ್ಲಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜ ಬಾಂಧವರಿಗೂ ಮತ್ತು ವಿವಿಧ ಸಂಘ-ಸಂಘ ಸಂಸ್ಥೆಗಳ ಸಾಧಕರಿಗೆ ಸನ್ಮಾನಿಸಿ ಗೌರವಿಸಿದರು.</p>.<p>ಶಿಕ್ಷಕರಾದ ಶರಣಬಸವ ಗೋನಾಲ ಸ್ವಾಗತಿಸಿದರು. ಮಹಾದೇವಪ್ಪ ಗುತ್ತೇದಾರ್ ನಿರೂಪಿಸಿದರು. ಸಿದ್ದಣ್ಣ ಸಾಲಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-30-1356167226</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>