<p><strong>ಸುರಪುರ</strong>: ನಗರದ ಅಂಬೇಡ್ಕರ್ ಬಡಾವಣೆಯಿಂದ ಬುದ್ಧ ವಿಹಾರಕ್ಕೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ದುರಸ್ತಿ ಮಾಡುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ರಾಜ್ಯ ಸಮಿತಿ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಆಗ್ರಹಿಸಿದ್ದಾರೆ.</p>.<p>‘ಚರಂಡಿ ವ್ಯವಸ್ಥೆ ಇಲ್ಲ. ಸ್ವಚ್ಛತೆ ಮರೀಚಿಕೆಯಾಗಿದೆ. ಬಚ್ಚಲು ಮೋರಿಯ ನೀರು ರಸ್ತೆ ಮೇಲೆ ಹರಿಯುತ್ತದೆ. ಅಲ್ಲಲ್ಲಿ ತೆಗ್ಗು ದಿನ್ನೆಗಳು ಇವೆ. ಜನರು ತಿರುಗಾಡಲು, ವಾಹನ ಸವಾರರು ವಾಹನ ಚಲಾಯಿಸಲು ಪರದಾಡುವಂತಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಮೇ 24 ರಂದು ಈ ಬಡಾವಣೆಯಲ್ಲಿ ಅಂಬೇಡ್ಕರ್ ಮೂರ್ತಿ ಅನಾವರಣ ಕಾರ್ಯಕ್ರಮ ನಡೆಯುತ್ತದೆ. ಬುದ್ಧ ವಿಹಾರದಲ್ಲಿ ಬೌದ್ಧ ಧರ್ಮದ ಪದ್ಧತಿಯಂತೆ ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಕಾರ್ಯಕ್ರಮದಲ್ಲಿ ಸಂಸ್ಥಾನಿಕರು, ಅಂಬೇಡ್ಕರ್ ಮನೆತನದ ಭೀಮರಾವ ಅಂಬೇಡ್ಕರ್ ಇತರ ಗಣ್ಯರು ಪಾಲ್ಗೊಳ್ಳುವರು. ಸುಮಾರು 10 ಸಾವಿರ ಜನ ಸೇರುವ ನಿರೀಕ್ಷೆ ಇದೆ. ಕಾರಣ ಶೀಘ್ರ ರಸ್ತೆ ದುರಸ್ತಿ ಮಾಡಿ ನೈರ್ಮಲ್ಯ ಕಾಪಾಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-30-5565293</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ನಗರದ ಅಂಬೇಡ್ಕರ್ ಬಡಾವಣೆಯಿಂದ ಬುದ್ಧ ವಿಹಾರಕ್ಕೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ದುರಸ್ತಿ ಮಾಡುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ರಾಜ್ಯ ಸಮಿತಿ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಆಗ್ರಹಿಸಿದ್ದಾರೆ.</p>.<p>‘ಚರಂಡಿ ವ್ಯವಸ್ಥೆ ಇಲ್ಲ. ಸ್ವಚ್ಛತೆ ಮರೀಚಿಕೆಯಾಗಿದೆ. ಬಚ್ಚಲು ಮೋರಿಯ ನೀರು ರಸ್ತೆ ಮೇಲೆ ಹರಿಯುತ್ತದೆ. ಅಲ್ಲಲ್ಲಿ ತೆಗ್ಗು ದಿನ್ನೆಗಳು ಇವೆ. ಜನರು ತಿರುಗಾಡಲು, ವಾಹನ ಸವಾರರು ವಾಹನ ಚಲಾಯಿಸಲು ಪರದಾಡುವಂತಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಮೇ 24 ರಂದು ಈ ಬಡಾವಣೆಯಲ್ಲಿ ಅಂಬೇಡ್ಕರ್ ಮೂರ್ತಿ ಅನಾವರಣ ಕಾರ್ಯಕ್ರಮ ನಡೆಯುತ್ತದೆ. ಬುದ್ಧ ವಿಹಾರದಲ್ಲಿ ಬೌದ್ಧ ಧರ್ಮದ ಪದ್ಧತಿಯಂತೆ ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಕಾರ್ಯಕ್ರಮದಲ್ಲಿ ಸಂಸ್ಥಾನಿಕರು, ಅಂಬೇಡ್ಕರ್ ಮನೆತನದ ಭೀಮರಾವ ಅಂಬೇಡ್ಕರ್ ಇತರ ಗಣ್ಯರು ಪಾಲ್ಗೊಳ್ಳುವರು. ಸುಮಾರು 10 ಸಾವಿರ ಜನ ಸೇರುವ ನಿರೀಕ್ಷೆ ಇದೆ. ಕಾರಣ ಶೀಘ್ರ ರಸ್ತೆ ದುರಸ್ತಿ ಮಾಡಿ ನೈರ್ಮಲ್ಯ ಕಾಪಾಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-30-5565293</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>