<p><strong>ಸುರಪುರ</strong> <strong>(ಯಾದಗಿರಿ ಜಿಲ್ಲೆ):</strong> ‘ಬೇರೆ ಶಾಲೆಗೆ ನಿಯೋಜಿಸಿರುವ ಶಿಕ್ಷಕರನ್ನು ನಮ್ಮ ಶಾಲೆಯಲ್ಲೇ ಮುಂದುವರಿಸಬೇಕು’ ಎಂದು ಒತ್ತಾಯಿಸಿ ತಾಲ್ಲೂಕಿನ ಚಿಕ್ಕನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಸೋಮವಾರ ಶಾಲೆಗೆ ಬೀಗ ಹಾಕಿ ಪ್ರತಿಭಟಿಸಿದರು.</p>.<p>ಶಾಲೆಯಲ್ಲಿದ್ದ ಗಣಿತ ವಿಷಯದ ಒಬ್ಬ ಶಿಕ್ಷಕರನ್ನು ನೆರೆಯ ಬೋನ್ಹಾಳ ಶಾಲೆಗೆ ನಿಯೋಜಿಸಿದ್ದು, ಗಣಿತ ವಿಷಯದ ತರಗತಿ ಸರಿಯಾಗಿ ನಡೆಯುತ್ತಿಲ್ಲ ಎಂದು ಮಕ್ಕಳು ಆರೋಪಿಸಿದರು.</p>.<p>ಮಕ್ಕಳ ಜೊತೆ ಎಸ್ಡಿಎಂಸಿ ಸದಸ್ಯರು, ಪಾಲಕರೂ ಧರಣಿ ಕುಳಿತರು. ಬೇರೆ ಶಾಲೆಗೆ ಶಿಕ್ಷಕರ ನಿಯೋಜನೆ ಕೈಬಿಡುವ ಕುರಿತ ಬಿಇಒ ನೀಡಿದ ಬಳಿಕ ತರಗತಿಗೆ ಮಕ್ಕಳು ಹಾಜರಾದರು.</p>.<p>‘ಅನ್ಯ ವಿಷಯಗಳ ಶಿಕ್ಷಕರ ನೇಮಕಕ್ಕೆ ಮನವಿ ಸಲ್ಲಿಸಲಿದ್ದು, ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ಎಸ್ಡಿಎಂಸಿ ಅಧ್ಯಕ್ಷ ನಿಂಗಪ್ಪ ಶೇಖಸಿಂಧಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗಿನ 255 ಮಕ್ಕಳಿದ್ದು, ಮೂವರು ಕಾಯಂ ಹಾಗೂ 6 ಅತಿಥಿ ಶಿಕ್ಷಕರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong> <strong>(ಯಾದಗಿರಿ ಜಿಲ್ಲೆ):</strong> ‘ಬೇರೆ ಶಾಲೆಗೆ ನಿಯೋಜಿಸಿರುವ ಶಿಕ್ಷಕರನ್ನು ನಮ್ಮ ಶಾಲೆಯಲ್ಲೇ ಮುಂದುವರಿಸಬೇಕು’ ಎಂದು ಒತ್ತಾಯಿಸಿ ತಾಲ್ಲೂಕಿನ ಚಿಕ್ಕನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಸೋಮವಾರ ಶಾಲೆಗೆ ಬೀಗ ಹಾಕಿ ಪ್ರತಿಭಟಿಸಿದರು.</p>.<p>ಶಾಲೆಯಲ್ಲಿದ್ದ ಗಣಿತ ವಿಷಯದ ಒಬ್ಬ ಶಿಕ್ಷಕರನ್ನು ನೆರೆಯ ಬೋನ್ಹಾಳ ಶಾಲೆಗೆ ನಿಯೋಜಿಸಿದ್ದು, ಗಣಿತ ವಿಷಯದ ತರಗತಿ ಸರಿಯಾಗಿ ನಡೆಯುತ್ತಿಲ್ಲ ಎಂದು ಮಕ್ಕಳು ಆರೋಪಿಸಿದರು.</p>.<p>ಮಕ್ಕಳ ಜೊತೆ ಎಸ್ಡಿಎಂಸಿ ಸದಸ್ಯರು, ಪಾಲಕರೂ ಧರಣಿ ಕುಳಿತರು. ಬೇರೆ ಶಾಲೆಗೆ ಶಿಕ್ಷಕರ ನಿಯೋಜನೆ ಕೈಬಿಡುವ ಕುರಿತ ಬಿಇಒ ನೀಡಿದ ಬಳಿಕ ತರಗತಿಗೆ ಮಕ್ಕಳು ಹಾಜರಾದರು.</p>.<p>‘ಅನ್ಯ ವಿಷಯಗಳ ಶಿಕ್ಷಕರ ನೇಮಕಕ್ಕೆ ಮನವಿ ಸಲ್ಲಿಸಲಿದ್ದು, ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ಎಸ್ಡಿಎಂಸಿ ಅಧ್ಯಕ್ಷ ನಿಂಗಪ್ಪ ಶೇಖಸಿಂಧಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗಿನ 255 ಮಕ್ಕಳಿದ್ದು, ಮೂವರು ಕಾಯಂ ಹಾಗೂ 6 ಅತಿಥಿ ಶಿಕ್ಷಕರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>