<p>ಸುರಪುರ: ‘ಐತಿಹಾಸಿಕ ಸ್ಮಾರಕಗಳು ನಮ್ಮ ಪರಂಪರೆಯ ಹೆಗ್ಗಳಿಕೆ. ಗತಕಾಲದ ಭವ್ಯ ಚರಿತ್ರೆಯನ್ನು ಪೀಳಿಗೆಯಿಂದ ಪೀಳಿಗೆಗೆ ಸಾಗಿಸುವ ಸಂದೇಹ ವಾಹಕಗಳು’ ಎಂದು ಉಪನ್ಯಾಸಕ ಸುರೇಶ ಮಾಮಡಿ ಹೇಳಿದರು.</p>.<p>ನಗರದ ಪ್ರಭು ಕಲಾ, ವಿಜ್ಞಾನ ಮತ್ತು ಜೆ.ಎಂ. ಬೋಹರಾ ವಾಣಿಜ್ಯ ಕಾಲೇಜು ತಾಲ್ಲೂಕಿನ ರುಕ್ಮಾಪುರ ಗ್ರಾಮದಲ್ಲಿ ಏರ್ಪಡಿಸಿರುವ ಎನ್ಎಸ್ಎಸ್ ಶಿಬಿರದಲ್ಲಿ ಶುಕ್ರವಾರ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಇತಿಹಾಸದ ಬಗ್ಗೆ ಪ್ರೇಮ ಬೆಳೆಸಿಕೊಳ್ಳಬೇಕು. ಐತಿಹಾಸಿಕ ಶ್ರೀಮಂತಿಕೆಯನ್ನು ಸಾರುವ ದೇವಾಲಯ, ಅರಮನೆ, ಕೋಟೆ ಕೊತ್ತಲುಗಳನ್ನು ಸಂರಕ್ಷಿಸಿ ಮುಂದಿನ ತಲೆಮಾರಿಗೆ ಉಳಿಸುವ ಪ್ರತಿಜ್ಞೆ ಮಾಡಬೇಕು’ ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.</p>.<p>ಉಪನ್ಯಾಸಕ ಸಾಯಿಬಣ್ಣ ಮುಡಬೂಳ ಮಾತನಾಡಿ, ‘ಎನ್ಎಸ್ಎಸ್ ಶ್ರಮದಾನದಲ್ಲಿ ಐತಿಹಾಸಿಕ ಸ್ಮಾರಕಗಳ ಸ್ವಚ್ಛತೆ ಕಾಪಾಡಬೇಕು. ಇತಿಹಾಸದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಸ್. ವಿರುಪಾಕ್ಷಿ ಮಾತನಾಡಿ, ‘ಈ ಸಲದ ಎನ್ಎಸ್ಎಸ್ ಶಿಬಿರದಲ್ಲಿ ದೇವಾಲಯ ಮತ್ತು ಸ್ಮಾರಕಗಳ ರಕ್ಷಣೆಗೆ ಹೆಚ್ಚು ಒತ್ತು ನೀಡಲಾಗಿದೆ’ ಎಂದರು.</p>.<p>ಉಪನ್ಯಾಸಕರಾದ ಶರಣಗೌಡ ಪಾಟೀಲ, ಶಶಿಕುಮಾರ ವೇದಿಕೆಯಲ್ಲಿದ್ದರು. ಉಪನ್ಯಾಸಕರಾದ ರಮೇಶ ಶಹಾಪುರಕರ, ಸವಿತಾ, ಮೌನೇಶ, ಶಿವಲೀಲಾ, ಅನಿತಾ, ಈರಮ್ಮ ಮತ್ತು ಶಿಬಿರಾರ್ಥಿಗಳು ಉಪಸ್ಥಿರಿದ್ದರು. ಸೃಷ್ಠಿ ನಿರೂಪಿಸಿದರು. ಸಂಗೀತಾ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-30-2094043330</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಪುರ: ‘ಐತಿಹಾಸಿಕ ಸ್ಮಾರಕಗಳು ನಮ್ಮ ಪರಂಪರೆಯ ಹೆಗ್ಗಳಿಕೆ. ಗತಕಾಲದ ಭವ್ಯ ಚರಿತ್ರೆಯನ್ನು ಪೀಳಿಗೆಯಿಂದ ಪೀಳಿಗೆಗೆ ಸಾಗಿಸುವ ಸಂದೇಹ ವಾಹಕಗಳು’ ಎಂದು ಉಪನ್ಯಾಸಕ ಸುರೇಶ ಮಾಮಡಿ ಹೇಳಿದರು.</p>.<p>ನಗರದ ಪ್ರಭು ಕಲಾ, ವಿಜ್ಞಾನ ಮತ್ತು ಜೆ.ಎಂ. ಬೋಹರಾ ವಾಣಿಜ್ಯ ಕಾಲೇಜು ತಾಲ್ಲೂಕಿನ ರುಕ್ಮಾಪುರ ಗ್ರಾಮದಲ್ಲಿ ಏರ್ಪಡಿಸಿರುವ ಎನ್ಎಸ್ಎಸ್ ಶಿಬಿರದಲ್ಲಿ ಶುಕ್ರವಾರ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಇತಿಹಾಸದ ಬಗ್ಗೆ ಪ್ರೇಮ ಬೆಳೆಸಿಕೊಳ್ಳಬೇಕು. ಐತಿಹಾಸಿಕ ಶ್ರೀಮಂತಿಕೆಯನ್ನು ಸಾರುವ ದೇವಾಲಯ, ಅರಮನೆ, ಕೋಟೆ ಕೊತ್ತಲುಗಳನ್ನು ಸಂರಕ್ಷಿಸಿ ಮುಂದಿನ ತಲೆಮಾರಿಗೆ ಉಳಿಸುವ ಪ್ರತಿಜ್ಞೆ ಮಾಡಬೇಕು’ ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.</p>.<p>ಉಪನ್ಯಾಸಕ ಸಾಯಿಬಣ್ಣ ಮುಡಬೂಳ ಮಾತನಾಡಿ, ‘ಎನ್ಎಸ್ಎಸ್ ಶ್ರಮದಾನದಲ್ಲಿ ಐತಿಹಾಸಿಕ ಸ್ಮಾರಕಗಳ ಸ್ವಚ್ಛತೆ ಕಾಪಾಡಬೇಕು. ಇತಿಹಾಸದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಸ್. ವಿರುಪಾಕ್ಷಿ ಮಾತನಾಡಿ, ‘ಈ ಸಲದ ಎನ್ಎಸ್ಎಸ್ ಶಿಬಿರದಲ್ಲಿ ದೇವಾಲಯ ಮತ್ತು ಸ್ಮಾರಕಗಳ ರಕ್ಷಣೆಗೆ ಹೆಚ್ಚು ಒತ್ತು ನೀಡಲಾಗಿದೆ’ ಎಂದರು.</p>.<p>ಉಪನ್ಯಾಸಕರಾದ ಶರಣಗೌಡ ಪಾಟೀಲ, ಶಶಿಕುಮಾರ ವೇದಿಕೆಯಲ್ಲಿದ್ದರು. ಉಪನ್ಯಾಸಕರಾದ ರಮೇಶ ಶಹಾಪುರಕರ, ಸವಿತಾ, ಮೌನೇಶ, ಶಿವಲೀಲಾ, ಅನಿತಾ, ಈರಮ್ಮ ಮತ್ತು ಶಿಬಿರಾರ್ಥಿಗಳು ಉಪಸ್ಥಿರಿದ್ದರು. ಸೃಷ್ಠಿ ನಿರೂಪಿಸಿದರು. ಸಂಗೀತಾ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-30-2094043330</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>