<p>ಸುರಪುರ: ‘ನರೇಗಾ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಿ, ಹೆಚ್ಚಿನ ಜನರು ಕೂಲಿ ಕೆಲಸಕ್ಕೆ ಬರುವಂತೆ ಮಾಡಬೇಕು’ ಎಂದು ಜಿ.ಪಂ. ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ ಹೇಳಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಬಾಂಗಣದಲ್ಲಿ ಬುಧವಾರ ನರೇಗಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.</p>.<p>‘ಕಾರ್ಮಿಕರಿಗೆ ಹೆಚ್ಚಿನ ಉದ್ಯೋಗ ಒದಗಿಸುವುದು ನಿಗದಿತ ಗುರಿಗೆ ತಕ್ಕಂತೆ ಮಾನವ ದಿನಗಳ ಸೃಜನೆ ಮಾಡಬೇಕು. ಹೆಚ್ಚು ಕಾರ್ಮಿಕರು ಕೆಲಸಕ್ಕೆ ಹಾಜರಾಗಲು ಜಾಗೃತಿ ಮೂಡಿಸಬೇಕು. ಸಕಾಲಕ್ಕೆ ಕೂಲಿ ಪಾವತಿ ಮಾಡಿ, ಕಾಮಗಾರಿಗಳನ್ನು ತ್ವರಿತವಾಗಿ ಮುಕ್ತಾಯಗೊಳಿಸಬೇಕು’ ಎಂದರು.</p>.<p>ಕಾರ್ಮಿಕರ ಜಾಬ್ ಕಾರ್ಡ್, ಹಾಜರಾತಿ, ಜಿಯೋ ಟ್ಯಾಗಿಂಗ್, ಇ–ಕೆವೈಸಿ, ತೆರಿಗೆ ವಸೂಲಾತಿ, ಸಕಾಲ ಅರ್ಜಿಗಳ ಪರಿಶೀಲನೆ, ಸಿಬ್ಬಂದಿ ಹಾಜರಾತಿ ಸೇರಿದಂತೆ ಇತರೆ ಕಡತಗಳ ಪರಿಶೀಲನೆ ಮಾಡಿದರು.</p>.<p>ಸಭೆಯಲ್ಲಿ ಡಿಎಂಐಎಸ್ ರಾಘವೇಂದ್ರ, ಡಿಐಇಸಿ ಪರುಶುರಾಮ, ಟಿ.ಸಿ. ಶಿವಯೋಗಿ ಹಿರೇಮಠ, ಟಿಎಂಐಎಸ್ ವೆಂಕನಗೌಡ ಪಾಟೀಲ, ಟಿಐಇಎಸ್ ಮಲ್ಲಿಕಾರ್ಜುನ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-30-606125692</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಪುರ: ‘ನರೇಗಾ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಿ, ಹೆಚ್ಚಿನ ಜನರು ಕೂಲಿ ಕೆಲಸಕ್ಕೆ ಬರುವಂತೆ ಮಾಡಬೇಕು’ ಎಂದು ಜಿ.ಪಂ. ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ ಹೇಳಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಬಾಂಗಣದಲ್ಲಿ ಬುಧವಾರ ನರೇಗಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.</p>.<p>‘ಕಾರ್ಮಿಕರಿಗೆ ಹೆಚ್ಚಿನ ಉದ್ಯೋಗ ಒದಗಿಸುವುದು ನಿಗದಿತ ಗುರಿಗೆ ತಕ್ಕಂತೆ ಮಾನವ ದಿನಗಳ ಸೃಜನೆ ಮಾಡಬೇಕು. ಹೆಚ್ಚು ಕಾರ್ಮಿಕರು ಕೆಲಸಕ್ಕೆ ಹಾಜರಾಗಲು ಜಾಗೃತಿ ಮೂಡಿಸಬೇಕು. ಸಕಾಲಕ್ಕೆ ಕೂಲಿ ಪಾವತಿ ಮಾಡಿ, ಕಾಮಗಾರಿಗಳನ್ನು ತ್ವರಿತವಾಗಿ ಮುಕ್ತಾಯಗೊಳಿಸಬೇಕು’ ಎಂದರು.</p>.<p>ಕಾರ್ಮಿಕರ ಜಾಬ್ ಕಾರ್ಡ್, ಹಾಜರಾತಿ, ಜಿಯೋ ಟ್ಯಾಗಿಂಗ್, ಇ–ಕೆವೈಸಿ, ತೆರಿಗೆ ವಸೂಲಾತಿ, ಸಕಾಲ ಅರ್ಜಿಗಳ ಪರಿಶೀಲನೆ, ಸಿಬ್ಬಂದಿ ಹಾಜರಾತಿ ಸೇರಿದಂತೆ ಇತರೆ ಕಡತಗಳ ಪರಿಶೀಲನೆ ಮಾಡಿದರು.</p>.<p>ಸಭೆಯಲ್ಲಿ ಡಿಎಂಐಎಸ್ ರಾಘವೇಂದ್ರ, ಡಿಐಇಸಿ ಪರುಶುರಾಮ, ಟಿ.ಸಿ. ಶಿವಯೋಗಿ ಹಿರೇಮಠ, ಟಿಎಂಐಎಸ್ ವೆಂಕನಗೌಡ ಪಾಟೀಲ, ಟಿಐಇಎಸ್ ಮಲ್ಲಿಕಾರ್ಜುನ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-30-606125692</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>