<p>ಸುರಪುರ: ‘ತಾಲ್ಲೂಕಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಇದೆ. ಯಾವುದೇ ಕೊರತೆ ಇಲ್ಲ. ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ’ ಎಂದು ಡಿವೈಎಸ್ಪಿ ಜಾವೇದ್ ಇನಾಂದಾರ್ ತಿಳಿಸಿದರು.</p>.<p>ಪೊಲೀಸ್ ಠಾಣೆಯಲ್ಲಿ ಬುಧವಾರ ಜರುಗಿದ ಪೆಟ್ರೋಲ್ ಪಂಪ್ ಬಂಕ್ಗಳ ಡೀಲರ್ಗಳ ಸಭೆಯಲ್ಲಿ ಮಾತನಾಡಿದ ಅವರು, ‘ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸಾಕಷ್ಟು ದಾಸ್ತಾನಿದ್ದು, ಊಹಾಪೋಹಗಳನ್ನು ನಂಬಬಾರದು. ಸುಳ್ಳು ಹಾಗೂ ಆತಂಕದ ಸುದ್ದಿಗಳಿಗೆ ಗ್ರಾಹಕರು ಕಿವಿಗೊಡಬಾರದು’ ಎಂದು ಹೇಳಿದರು.</p>.<p>‘ಬಂಕ್ಗಳ ಡೀಲರ್ಗಳು ಯಾವುದೇ ಕಾರಣಕ್ಕೆ ಸ್ಟಾಕ್ ಮಾಡಕೂಡದು. ಕಾಳಸಂತೆಯಲ್ಲಿ ಮಾರಾಟ ಮಾಡುವಂತಿಲ್ಲ. ಹೆಚ್ಚಿನ ದರಕ್ಕೆ ಮಾರಾಟ ಮಾಡಕೂಡದು. ನಿಗದಿತ ದರದಲ್ಲಿಯೇ ಗ್ರಾಹಕರಿಗೆ ಸಮರ್ಪಕವಾಗಿ ಇಂಧನ ಹಾಕಬೇಕು. ಅಗತ್ಯಕ್ಕೆ ತಕ್ಕಂತೆ ಇಂಧನ ಪಡೆದು ಸಹಕರಿಸಬೇಕು. ಆತಂಕದ ಖರೀದಿ ಮಾಡಕೂಡದು’ ಎಂದು ಸಲಹೆ ನೀಡಿದರು.</p>.<p>ಪಿಐ ಉಮೇಶ್ ನಾಯಕ ಮಾತನಾಡಿದರು. ವಿವಿಧ ಪೆಟ್ರೋಲ್ ಬಂಕ್ಗಳ ನಿರ್ವಹಣಾಕಾರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-30-766423349</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಪುರ: ‘ತಾಲ್ಲೂಕಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಇದೆ. ಯಾವುದೇ ಕೊರತೆ ಇಲ್ಲ. ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ’ ಎಂದು ಡಿವೈಎಸ್ಪಿ ಜಾವೇದ್ ಇನಾಂದಾರ್ ತಿಳಿಸಿದರು.</p>.<p>ಪೊಲೀಸ್ ಠಾಣೆಯಲ್ಲಿ ಬುಧವಾರ ಜರುಗಿದ ಪೆಟ್ರೋಲ್ ಪಂಪ್ ಬಂಕ್ಗಳ ಡೀಲರ್ಗಳ ಸಭೆಯಲ್ಲಿ ಮಾತನಾಡಿದ ಅವರು, ‘ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸಾಕಷ್ಟು ದಾಸ್ತಾನಿದ್ದು, ಊಹಾಪೋಹಗಳನ್ನು ನಂಬಬಾರದು. ಸುಳ್ಳು ಹಾಗೂ ಆತಂಕದ ಸುದ್ದಿಗಳಿಗೆ ಗ್ರಾಹಕರು ಕಿವಿಗೊಡಬಾರದು’ ಎಂದು ಹೇಳಿದರು.</p>.<p>‘ಬಂಕ್ಗಳ ಡೀಲರ್ಗಳು ಯಾವುದೇ ಕಾರಣಕ್ಕೆ ಸ್ಟಾಕ್ ಮಾಡಕೂಡದು. ಕಾಳಸಂತೆಯಲ್ಲಿ ಮಾರಾಟ ಮಾಡುವಂತಿಲ್ಲ. ಹೆಚ್ಚಿನ ದರಕ್ಕೆ ಮಾರಾಟ ಮಾಡಕೂಡದು. ನಿಗದಿತ ದರದಲ್ಲಿಯೇ ಗ್ರಾಹಕರಿಗೆ ಸಮರ್ಪಕವಾಗಿ ಇಂಧನ ಹಾಕಬೇಕು. ಅಗತ್ಯಕ್ಕೆ ತಕ್ಕಂತೆ ಇಂಧನ ಪಡೆದು ಸಹಕರಿಸಬೇಕು. ಆತಂಕದ ಖರೀದಿ ಮಾಡಕೂಡದು’ ಎಂದು ಸಲಹೆ ನೀಡಿದರು.</p>.<p>ಪಿಐ ಉಮೇಶ್ ನಾಯಕ ಮಾತನಾಡಿದರು. ವಿವಿಧ ಪೆಟ್ರೋಲ್ ಬಂಕ್ಗಳ ನಿರ್ವಹಣಾಕಾರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-30-766423349</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>