<p><strong>ಸುರಪುರ</strong>: ‘ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ ಹಕ್ಕುಗಳನ್ನು ರಕ್ಷಿಸುವುದು ಮತ್ತು ಅವರ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ರಾಜಕೀಯ ಶಕ್ತಿಯನ್ನು ಹೆಚ್ಚಿಸುವ ಮುಖ್ಯ ಉದ್ದೇಶ ‘ಅಹಿಂದ’ ಸಂಘಟನೆ ಹೊಂದಿದೆ’ ಎಂದು ಹಿರಿಯ ಮುಖಂಡ ಮಲ್ಲಯ್ಯ ಕಮತಗಿ ಹೇಳಿದರು.</p>.<p>ನಗರದ ಟೇಲರ್ ಮಂಜಿಲ್ದಲ್ಲಿ ಸೋಮವಾರ ಅಹಿಂದ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಈ ಸಂಘಟನೆ ಬುದ್ಧ, ಬಸವ ಮತ್ತು ಅಂಬೇಡ್ಕರ್ ತತ್ವಗಳ ಆಧಾರದ ಮೇಲೆ ರೂಪಗೊಂಡಿದೆ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ’ ಎಂದು ತಿಳಿಸಿದರು.</p>.<p>ಮುಖಂಡ ಅಹ್ಮದ್ ಪಠಾಣ ಮಾತನಾಡಿ, ‘ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರು ಒಕ್ಕಟ್ಟಾಗಿ ಹೋರಾಟ ಮಾಡಿದರೆ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ಕಾರ್ಯನಿರ್ವಹಿಸಬೇಕು’ ಎಂದು ಕರೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಘಟಕದ ನೂತನ ಅಧ್ಯಕ್ಷ ಮಾನಪ್ಪ ಸುಗೂರ ಮಾತನಾಡಿ, ‘ಸಂಘಟನೆ ಬಲಪಡಿಸಿದಷ್ಟು ನಮಗೆ ಉತ್ತಮ. ಈಗ ಸಂಘಟನೆ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಹರಡಿದೆ. ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಒಗ್ಗಟ್ಟಿನಲ್ಲಿ ಬಲವಿದೆ’ ಎಂದರು.</p>.<p>ಚಂದಪ್ಪ ಯಾದವ, ವೆಂಕಟೇಶ ಹೊಸಮನಿ, ಬಸವರಾಜ ಮಾಲಿಪಾಟೀಲ, ಮೌನೇಶ ದೇವಡಿ, ಯಂಕಪ್ಪ ಪರಾಸಿ, ಬಿ. ಗುರಪ್ಪ ಇತರರು ಉಪಸ್ಥಿತರಿದ್ದರು.</p>.<p>ನೂತನ ಪದಾಧಿಕಾರಿಗಳು: ಮಾನಪ್ಪ ಸುಗೂರ (ಅಧ್ಯಕ್ಷ), ಶ್ರೀನಿವಾಸ ಪಾಟೀಲ, ಮಲ್ಲಿಕಾರ್ಜುನ ಸಾಹುಕಾರ (ಉಪಾಧ್ಯಕ್ಷರು), ರಾಹುಲ ಹುಲಿಮನಿ (ಪ್ರಧಾನ ಕಾರ್ಯದರ್ಶಿ), ಮಡಿವಾಳಪ್ಪ ಬಿಜಾಸಪುರ, ನಿಂಗಣ್ಣ ಗೋನಾಲ, ಗುರಣ್ಣ ಸಾಹುಕಾರ, ವೆಂಕಣ್ಣ ಯಾದವ (ಕಾರ್ಯದರ್ಶಿಗಳು), ದಾವುದ್ ಪಠಾಣ (ಖಜಾಂಚಿ).</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ‘ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ ಹಕ್ಕುಗಳನ್ನು ರಕ್ಷಿಸುವುದು ಮತ್ತು ಅವರ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ರಾಜಕೀಯ ಶಕ್ತಿಯನ್ನು ಹೆಚ್ಚಿಸುವ ಮುಖ್ಯ ಉದ್ದೇಶ ‘ಅಹಿಂದ’ ಸಂಘಟನೆ ಹೊಂದಿದೆ’ ಎಂದು ಹಿರಿಯ ಮುಖಂಡ ಮಲ್ಲಯ್ಯ ಕಮತಗಿ ಹೇಳಿದರು.</p>.<p>ನಗರದ ಟೇಲರ್ ಮಂಜಿಲ್ದಲ್ಲಿ ಸೋಮವಾರ ಅಹಿಂದ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಈ ಸಂಘಟನೆ ಬುದ್ಧ, ಬಸವ ಮತ್ತು ಅಂಬೇಡ್ಕರ್ ತತ್ವಗಳ ಆಧಾರದ ಮೇಲೆ ರೂಪಗೊಂಡಿದೆ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ’ ಎಂದು ತಿಳಿಸಿದರು.</p>.<p>ಮುಖಂಡ ಅಹ್ಮದ್ ಪಠಾಣ ಮಾತನಾಡಿ, ‘ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರು ಒಕ್ಕಟ್ಟಾಗಿ ಹೋರಾಟ ಮಾಡಿದರೆ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ಕಾರ್ಯನಿರ್ವಹಿಸಬೇಕು’ ಎಂದು ಕರೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಘಟಕದ ನೂತನ ಅಧ್ಯಕ್ಷ ಮಾನಪ್ಪ ಸುಗೂರ ಮಾತನಾಡಿ, ‘ಸಂಘಟನೆ ಬಲಪಡಿಸಿದಷ್ಟು ನಮಗೆ ಉತ್ತಮ. ಈಗ ಸಂಘಟನೆ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಹರಡಿದೆ. ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಒಗ್ಗಟ್ಟಿನಲ್ಲಿ ಬಲವಿದೆ’ ಎಂದರು.</p>.<p>ಚಂದಪ್ಪ ಯಾದವ, ವೆಂಕಟೇಶ ಹೊಸಮನಿ, ಬಸವರಾಜ ಮಾಲಿಪಾಟೀಲ, ಮೌನೇಶ ದೇವಡಿ, ಯಂಕಪ್ಪ ಪರಾಸಿ, ಬಿ. ಗುರಪ್ಪ ಇತರರು ಉಪಸ್ಥಿತರಿದ್ದರು.</p>.<p>ನೂತನ ಪದಾಧಿಕಾರಿಗಳು: ಮಾನಪ್ಪ ಸುಗೂರ (ಅಧ್ಯಕ್ಷ), ಶ್ರೀನಿವಾಸ ಪಾಟೀಲ, ಮಲ್ಲಿಕಾರ್ಜುನ ಸಾಹುಕಾರ (ಉಪಾಧ್ಯಕ್ಷರು), ರಾಹುಲ ಹುಲಿಮನಿ (ಪ್ರಧಾನ ಕಾರ್ಯದರ್ಶಿ), ಮಡಿವಾಳಪ್ಪ ಬಿಜಾಸಪುರ, ನಿಂಗಣ್ಣ ಗೋನಾಲ, ಗುರಣ್ಣ ಸಾಹುಕಾರ, ವೆಂಕಣ್ಣ ಯಾದವ (ಕಾರ್ಯದರ್ಶಿಗಳು), ದಾವುದ್ ಪಠಾಣ (ಖಜಾಂಚಿ).</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>