<p>ಸುರಪುರ: ಅಖಿಲ ಭಾರತ ಮುಷ್ಕರದ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ (ಜೆಸಿಟಿಯು) ಮುಖಂಡರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಗಾಂಧೀಜಿ ವೃತ್ತದಲ್ಲಿ ಸಮಾವೇಶಗೊಂಡರು. ಪ್ರತಿಭಟನಾಕಾರರು ಸರ್ಕಾರದ ಧೋರಣೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮುಖಂಡ ದೇವಿಂದ್ರಪ್ಪ ಪತ್ತಾರ ಮಾತನಾಡಿ, ‘ದೇಶವು ಲಾಕ್ಡೌನ್ ನಿಯಮಗಳು ಮತ್ತು ಕೋವಿಡ್-19 ಸಾಂಕ್ರಾಮಿಕವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕರಾಳ ಮಸೂದೆಗಳನ್ನು ಸುಗ್ರೀವಾಜ್ಞೆಗಳ ಮೂಲಕ ಜಾರಿಗೊಳಿಸುತ್ತಿದೆ’ ಎಂದು ಆರೋಪಿಸಿದರು.</p>.<p>ಮುಖಂಡ ಚನ್ನಪ್ಪ ಆನೇಗುಂದಿ ಮಾತನಾಡಿ, ‘ಕಾರ್ಮಿಕ ಸಂಹಿತೆಗಳನ್ನು ಕಾರ್ಮಿಕರ ಮೇಲೆ ಗುಲಾಮಗಿರಿಯ ಷರತ್ತುಗಳನ್ನು ವಿಧಿಸಲು ವಿನ್ಯಾಸಗೊಳಿಸಲಾಗಿದೆ. ಕಾರ್ಮಿಕ ಸಂಘಗಳ ರಚನೆಯನ್ನು ಇನ್ನಷ್ಟು ಜಟಿಲಗೊಳಿಸಿ ಮತ್ತು ಮುಷ್ಕರದ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ’ ಎಂದು ದೂರಿದರು.</p>.<p>ಡಿ. ಉಮಾದೇವಿ ಮಾತನಾಡಿ, ‘ಕೇಂದ್ರ ಸರ್ಕಾರ ಕಾರ್ಮಿಕ ಕಾನೂನು ತಿದ್ದುಪಡಿ ಸಂಹಿತೆಯನ್ನು ಹಾಗೂ ಎಪಿಎಂಸಿ, ವಿದ್ಯುತ್, ಭೂ ಸುಧಾರಣಾ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.</p>.<p>ಪ್ರಧಾನಮಂತ್ರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಸೋಫಿಯಾ ಸುಲ್ತಾನ ಅವರಿಗೆ ಸಲ್ಲಿಸಲಾಯಿತು.</p>.<p>ಮುಖಂಡರಾದ ಸುರೇಖಾ ಕುಲಕರ್ಣಿ, ಹಣಮಂತರಾಯ ಮಡಿವಾಳ, ದಾವೂದ್ ಇಬ್ರಾಹಿಂ ಪಠಾಣ, ಮಲ್ಲಪ್ಪ ವಗ್ಗಾ, ಭೀಮರಾಯ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತು ವಿವಿಧ ಸಂಘಟನೆಗಳ ಮುಖಂಡರು, ಕಾರ್ಮಿಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಪುರ: ಅಖಿಲ ಭಾರತ ಮುಷ್ಕರದ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ (ಜೆಸಿಟಿಯು) ಮುಖಂಡರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಗಾಂಧೀಜಿ ವೃತ್ತದಲ್ಲಿ ಸಮಾವೇಶಗೊಂಡರು. ಪ್ರತಿಭಟನಾಕಾರರು ಸರ್ಕಾರದ ಧೋರಣೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮುಖಂಡ ದೇವಿಂದ್ರಪ್ಪ ಪತ್ತಾರ ಮಾತನಾಡಿ, ‘ದೇಶವು ಲಾಕ್ಡೌನ್ ನಿಯಮಗಳು ಮತ್ತು ಕೋವಿಡ್-19 ಸಾಂಕ್ರಾಮಿಕವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕರಾಳ ಮಸೂದೆಗಳನ್ನು ಸುಗ್ರೀವಾಜ್ಞೆಗಳ ಮೂಲಕ ಜಾರಿಗೊಳಿಸುತ್ತಿದೆ’ ಎಂದು ಆರೋಪಿಸಿದರು.</p>.<p>ಮುಖಂಡ ಚನ್ನಪ್ಪ ಆನೇಗುಂದಿ ಮಾತನಾಡಿ, ‘ಕಾರ್ಮಿಕ ಸಂಹಿತೆಗಳನ್ನು ಕಾರ್ಮಿಕರ ಮೇಲೆ ಗುಲಾಮಗಿರಿಯ ಷರತ್ತುಗಳನ್ನು ವಿಧಿಸಲು ವಿನ್ಯಾಸಗೊಳಿಸಲಾಗಿದೆ. ಕಾರ್ಮಿಕ ಸಂಘಗಳ ರಚನೆಯನ್ನು ಇನ್ನಷ್ಟು ಜಟಿಲಗೊಳಿಸಿ ಮತ್ತು ಮುಷ್ಕರದ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ’ ಎಂದು ದೂರಿದರು.</p>.<p>ಡಿ. ಉಮಾದೇವಿ ಮಾತನಾಡಿ, ‘ಕೇಂದ್ರ ಸರ್ಕಾರ ಕಾರ್ಮಿಕ ಕಾನೂನು ತಿದ್ದುಪಡಿ ಸಂಹಿತೆಯನ್ನು ಹಾಗೂ ಎಪಿಎಂಸಿ, ವಿದ್ಯುತ್, ಭೂ ಸುಧಾರಣಾ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.</p>.<p>ಪ್ರಧಾನಮಂತ್ರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಸೋಫಿಯಾ ಸುಲ್ತಾನ ಅವರಿಗೆ ಸಲ್ಲಿಸಲಾಯಿತು.</p>.<p>ಮುಖಂಡರಾದ ಸುರೇಖಾ ಕುಲಕರ್ಣಿ, ಹಣಮಂತರಾಯ ಮಡಿವಾಳ, ದಾವೂದ್ ಇಬ್ರಾಹಿಂ ಪಠಾಣ, ಮಲ್ಲಪ್ಪ ವಗ್ಗಾ, ಭೀಮರಾಯ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತು ವಿವಿಧ ಸಂಘಟನೆಗಳ ಮುಖಂಡರು, ಕಾರ್ಮಿಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>