<p><strong>ಸುರಪುರ:</strong> ‘ಇಲ್ಲಿಯ ಅಂಬೇಡ್ಕರ್ ವೃತ್ತದ ಅಭಿವೃದ್ಧಿಗಾಗಿ ಸರ್ಕಾರ ಭೂಮಿ ಮಂಜೂರು ಮಾಡಬೇಕು’ ಎಂದು ಭಂತೇಜಿ ಥೇರೋ ಆಗ್ರಹಿಸಿದರು.</p>.<p>ದಲಿತ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿರುವ ನಿರಂತರ ಧರಣಿ ಕಾರ್ಯಕ್ರಮದಲ್ಲಿ ಶನಿವಾರ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಖಾರಿಜ್ ಖಾತಾ ಸರ್ವೆ ನಂ.7/1 ರಲ್ಲಿ ಒತ್ತುವರಿ ಆಗಿರುವ 2.26 ಗುಂಟೆ ಭೂಮಿಯಲ್ಲಿ ಭೂಮಿ ಮಂಜೂರಾತಿ ನೀಡಬೇಕು ಎಂದು ಆಗ್ರಹಿಸಿ ಸಂಘಟನೆಗಳ ಒಕ್ಕೂಟದ ಮುಖಂಡರು ಆಗಸ್ಟ್ 20ರಿಂದ ನಿರಂತರ ಧರಣಿ ಮುಂದುವರಿಸಿದ್ದಾರೆ’ ಎಂದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಜಿಲ್ಲಾಡಳಿತಕ್ಕೆ ಭೂಮಿ ಮಂಜೂರಾತಿ ಮಾಡುವಂತೆ ತಿಳಿಸಬೇಕು. ಸರ್ಕಾರ ಹೋರಾಟಗಾರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಹೇಳಿದರು.</p>.<p>ಮುಖಂಡರಾದ ಮಾನಪ್ಪ ಕಟ್ಟಿಮನಿ, ರಾಹುಲ ಹುಲಿಮನಿ, ವೆಂಕಟೇಶ ಹೊಸಮನಿ, ಬಸವರಾಜ ಶೆಳ್ಳಗಿ, ತಿಪ್ಪಣ್ಣ ಶೆಳ್ಳಗಿ, ವೀರಭದ್ರ ತಳವಾರಗೇರಾ, ಚನ್ನಪ್ಪ ದೇವಾಪುರ, ಮರಲಿಂಗ ಗುಡಿಮನಿ, ಶರಣಪ್ಪ ವಾಗಣಗೇರಾ, ರಾಜು ಕಟ್ಟಿಮನಿ, ಆಕಾಶ ಕಟ್ಟಿಮನಿ, ಶೇಖರ ಮಂಗಳೂರು, ವೈಜನಾಥ ಹೊಸಮನಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ‘ಇಲ್ಲಿಯ ಅಂಬೇಡ್ಕರ್ ವೃತ್ತದ ಅಭಿವೃದ್ಧಿಗಾಗಿ ಸರ್ಕಾರ ಭೂಮಿ ಮಂಜೂರು ಮಾಡಬೇಕು’ ಎಂದು ಭಂತೇಜಿ ಥೇರೋ ಆಗ್ರಹಿಸಿದರು.</p>.<p>ದಲಿತ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿರುವ ನಿರಂತರ ಧರಣಿ ಕಾರ್ಯಕ್ರಮದಲ್ಲಿ ಶನಿವಾರ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಖಾರಿಜ್ ಖಾತಾ ಸರ್ವೆ ನಂ.7/1 ರಲ್ಲಿ ಒತ್ತುವರಿ ಆಗಿರುವ 2.26 ಗುಂಟೆ ಭೂಮಿಯಲ್ಲಿ ಭೂಮಿ ಮಂಜೂರಾತಿ ನೀಡಬೇಕು ಎಂದು ಆಗ್ರಹಿಸಿ ಸಂಘಟನೆಗಳ ಒಕ್ಕೂಟದ ಮುಖಂಡರು ಆಗಸ್ಟ್ 20ರಿಂದ ನಿರಂತರ ಧರಣಿ ಮುಂದುವರಿಸಿದ್ದಾರೆ’ ಎಂದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಜಿಲ್ಲಾಡಳಿತಕ್ಕೆ ಭೂಮಿ ಮಂಜೂರಾತಿ ಮಾಡುವಂತೆ ತಿಳಿಸಬೇಕು. ಸರ್ಕಾರ ಹೋರಾಟಗಾರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಹೇಳಿದರು.</p>.<p>ಮುಖಂಡರಾದ ಮಾನಪ್ಪ ಕಟ್ಟಿಮನಿ, ರಾಹುಲ ಹುಲಿಮನಿ, ವೆಂಕಟೇಶ ಹೊಸಮನಿ, ಬಸವರಾಜ ಶೆಳ್ಳಗಿ, ತಿಪ್ಪಣ್ಣ ಶೆಳ್ಳಗಿ, ವೀರಭದ್ರ ತಳವಾರಗೇರಾ, ಚನ್ನಪ್ಪ ದೇವಾಪುರ, ಮರಲಿಂಗ ಗುಡಿಮನಿ, ಶರಣಪ್ಪ ವಾಗಣಗೇರಾ, ರಾಜು ಕಟ್ಟಿಮನಿ, ಆಕಾಶ ಕಟ್ಟಿಮನಿ, ಶೇಖರ ಮಂಗಳೂರು, ವೈಜನಾಥ ಹೊಸಮನಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>