<p><strong>ಸುರಪುರ:</strong> 2023ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸಿದ್ದ ಆರ್.ಎಂ. ನಾಯಕ ಇನಾಮದಾರ್ ಬುಧವಾರ ತಮ್ಮ ಬೆಂಬಲಿಗರೊಂದಿಗೆ ಅಭ್ಯರ್ಥಿ ರಾಜೂಗೌಡ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಇನಾಮದಾರ್, ‘ಬಿಜೆಪಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಉಳಿದ ಪಕ್ಷಗಳಿಂದ ದೇಶಕ್ಕೆ ಕೊಡುಗೆ ಇಲ್ಲ. ಆಮ್ ಆದ್ಮಿ ಪಕ್ಷ ಕೇವಲ ಎರಡು ರಾಜ್ಯಗಳಲ್ಲಿ ಪ್ರಭಾವ ಹೊಂದಿದೆ. ರಾಜೂಗೌಡ ಅವರಲ್ಲಿ ವಿಶ್ವಾಸವಿಟ್ಟು ಬಿಜೆಪಿ ಸೇರಿದ್ದೇನೆ’ ಎಂದು ತಿಳಿಸಿದರು.</p>.<p>ರಾಜೂಗೌಡ ಮಾತನಾಡಿ, ‘ದೇಶದಲ್ಲಿ ಆಮ್ ಆದ್ಮಿ ಪಕ್ಷ ಇಂಡಿಯಾ ಒಕ್ಕೂಟ ಬೆಂಬಲಿಸುತ್ತಿದೆ. ಸುರಪುರದಲ್ಲಿ ಆ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಬಿಜಿಪಿಗೆ ಸೇರಿದ್ದಾರೆ. ಇದು ನನ್ನ ಗೆಲುವಿಗೆ ಕೊಡುಗೆ ನೀಡಲಿದೆ’ ಎಂದರು.</p>.<p>ಎಎಪಿ ಮುಖಂಡರಾದ ಲಕ್ಷ್ಮಣನಾಯಕ ಇನಾಮದಾರ, ವೆಂಕಟೇಶನಾಯಕ ಇನಾಮದಾರ, ಪ್ರಭು ಮುದನೂರ, ಪರಶುರಾಮ ಪೂಜಾರಿ, ಪರಶುರಾಮ ರಾಠೋಡ, ರಂಗಪ್ಪನಾಯಕ ಪ್ಯಾಪ್ಲಿ, ಸೋಮಣ್ಣಗೌಡ ಕಮಲಾಪುರ, ರೇವಣಸಿದ್ದಪ್ಪ ಕಮಾಲಪುರ ಇತರರು ಬಿಜೆಪಿಗೆ ಸೇರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> 2023ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸಿದ್ದ ಆರ್.ಎಂ. ನಾಯಕ ಇನಾಮದಾರ್ ಬುಧವಾರ ತಮ್ಮ ಬೆಂಬಲಿಗರೊಂದಿಗೆ ಅಭ್ಯರ್ಥಿ ರಾಜೂಗೌಡ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಇನಾಮದಾರ್, ‘ಬಿಜೆಪಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಉಳಿದ ಪಕ್ಷಗಳಿಂದ ದೇಶಕ್ಕೆ ಕೊಡುಗೆ ಇಲ್ಲ. ಆಮ್ ಆದ್ಮಿ ಪಕ್ಷ ಕೇವಲ ಎರಡು ರಾಜ್ಯಗಳಲ್ಲಿ ಪ್ರಭಾವ ಹೊಂದಿದೆ. ರಾಜೂಗೌಡ ಅವರಲ್ಲಿ ವಿಶ್ವಾಸವಿಟ್ಟು ಬಿಜೆಪಿ ಸೇರಿದ್ದೇನೆ’ ಎಂದು ತಿಳಿಸಿದರು.</p>.<p>ರಾಜೂಗೌಡ ಮಾತನಾಡಿ, ‘ದೇಶದಲ್ಲಿ ಆಮ್ ಆದ್ಮಿ ಪಕ್ಷ ಇಂಡಿಯಾ ಒಕ್ಕೂಟ ಬೆಂಬಲಿಸುತ್ತಿದೆ. ಸುರಪುರದಲ್ಲಿ ಆ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಬಿಜಿಪಿಗೆ ಸೇರಿದ್ದಾರೆ. ಇದು ನನ್ನ ಗೆಲುವಿಗೆ ಕೊಡುಗೆ ನೀಡಲಿದೆ’ ಎಂದರು.</p>.<p>ಎಎಪಿ ಮುಖಂಡರಾದ ಲಕ್ಷ್ಮಣನಾಯಕ ಇನಾಮದಾರ, ವೆಂಕಟೇಶನಾಯಕ ಇನಾಮದಾರ, ಪ್ರಭು ಮುದನೂರ, ಪರಶುರಾಮ ಪೂಜಾರಿ, ಪರಶುರಾಮ ರಾಠೋಡ, ರಂಗಪ್ಪನಾಯಕ ಪ್ಯಾಪ್ಲಿ, ಸೋಮಣ್ಣಗೌಡ ಕಮಲಾಪುರ, ರೇವಣಸಿದ್ದಪ್ಪ ಕಮಾಲಪುರ ಇತರರು ಬಿಜೆಪಿಗೆ ಸೇರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>