ಜಮೀನಿನ ಟಿಪ್ಪಣಿ ತಿದ್ದುಪಡಿ ಸಂಬಂಧ ರೈತನಿಂದ ₹ 40 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ ಹಾಗೂ ಸಿಬ್ಬಂದಿ, ಮುಂಗಡವಾಗಿ ₹10 ಸಾವಿರ ಹಣ ಪಡೆದಿದ್ದ ಅಧಿಕಾರಿ ಹಾಗೂ ಸಿಬ್ಬಂದಿ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.
ಲೋಕಾಯುಕ್ತ ಎಸ್ಪಿ ಅಬ್ದುಲ್ ರೌಫ್ ಕರ್ನೂಲ್ ಮಾರ್ಗದರ್ಶನದಲ್ಲಿ ಪಿಐ ಅರುಣ ಕುಮಾರ್, ಹಣಮಂತ ಸಣ್ಣಮನಿ ನೇತೃತ್ವದಲ್ಲಿ ದಾಳಿ ನಡೆದಿದೆ.
‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಲೋಕಾಯುಕ್ತ ಎಸ್ಪಿ ಅಬ್ದುಲ್ ರೌಫ್ ಕರ್ನೂಲ್, ‘ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಅಗತ್ಯವೆಸಿದರೆ ಆರೋಪಿಗಳನ್ನು ಬಂಧಿಸಲಾಗುವುದು’ ಎಂದು ತಿಳಿಸಿದರು.