ಹರಿದಾಸ ಕೀರ್ತನೆಗಳನ್ನು ಎಲ್ಲರಿಗೂ ಮುಟ್ಟಿಸಬೇಕು ಎನ್ನುವ ನಿಟ್ಟಿನಲ್ಲಿ ದಾಸ ನಮನ ಗಾಯನ ಸ್ಪರ್ಧೆ ಏರ್ಪಡಿಸಲಾಗುತ್ತಿದ್ದು, ಫೆಬ್ರುವರಿ 1 ರಂದು ಕಾರ್ಯಕ್ರಮ ಪ್ರಾರಂಭಿಸಲಾಗುತ್ತದೆ. ಎಲ್ಲ ಜಿಲ್ಲೆಗಳಿಂದ 10 ಯುವಕ, ಯುವತಿಯರನ್ನು ಆಯ್ಕೆ ಮಾಡಿಕೊಂಡು ರಾಜ್ಯ ಮಟ್ಟದಲ್ಲಿ ಆಯ್ಕೆಯಾದವರಿಗೆ ಟ್ರಸ್ಟ್ನ ಪಾರಿತೋಷಕ ನೀಡಲಾಗುವುದು ಎಂದು ತಿಳಿಸಿದರು.
ಬ್ರಾಹ್ಮಣ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರರಾವ್ ಮುಂಡರಗಿ, ಶ್ರೀನಿವಾಸರಾವ್ ಪದಕಿ, ಶಂಕರನಾರಾಯಣ ಪಸಪುಲ, ಪ್ರವೀಣ ದೇಶಮುಖ, ಗುರುರಾಜ ಕುಲಕರ್ಣಿ ಲಿಂಗೇರಿ ಇದ್ದರು.