<p>ಭಾಲ್ಕಿ: ಹಾನಗಲ್ ಕುಮಾರ ಶಿವಯೋಗಿಗಳು ಸಮಾಜಕ್ಕೆ ಮಠಾಧೀಶರನ್ನು ಕೊಟ್ಟರು ಎಂದು ಹೈದರಾಬಾದ್-ಹಲಬರ್ಗಾ-ಶಿವಣಿ ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯ ನುಡಿದರು.</p>.<p>ತಾಲ್ಲೂಕಿನ ಹಲಬರ್ಗಾ ಗ್ರಾಮದಲ್ಲಿ ನಡೆದ ಹಾನಗಲ್ ಕುಮಾರೇಶ್ವರ ಶಿವಯೋಗಿಗಳ 157ನೇ ಜಯಂತಿ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಸುಂದರ ಸಮಾಜ ಕಟ್ಟುವುದೇ ಅವರ ಧ್ಯೇಯವಾಗಿತ್ತು. ಅದಕ್ಕಾಗಿ ಶಿವಯೋಗ ಮಂದಿರ ಸ್ಥಾಪಿಸಿ, ಅಲ್ಲಿ ಮಠಾಧೀಶರಾಗ ಬಯಸುವವರಿಗೆ ಸಮಾಜಕ್ಕೆ ಮಾರ್ಗದರ್ಶನ ನೀಡುವ ತರಬೇತಿ ನೀಡಿದ್ದರು. ಈಗ ಪ್ರತಿ ಊರಲ್ಲೂ ಮಠಾಧೀಶರನ್ನು ಕಾಣುತ್ತಿರುವುದರ ಶ್ರೇಯ ಶ್ರೀಗಳಿಗೆ ಸಲ್ಲುತ್ತದೆ ಎಂದು ಹೇಳಿದರು. </p>.<p>ಸಮಾಜ ಸಂಘಟನೆಗಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಸ್ಥಾಪಿಸಿದ್ದರು. ಗದುಗಿನ ಪುಣ್ಯಾಶ್ರಮವನ್ನು ಎತ್ತರಕ್ಕೆ ಬೆಳೆಸಿದ್ದರು. ಹಳ್ಳಿ ಹಳ್ಳಿಗಳಿಗೆ ಸಂಚರಿಸಿ ಜನರಲ್ಲಿ ಆಧ್ಯಾತ್ಮದ ಒಲವು ಬೆಳೆಸಿದ್ದರು. ಬಡವರು, ದೀನ- ದಲಿತರ ಬಗ್ಗೆ ಅವರಿಗೆ ಬಹಳ ಕಾಳಜಿ ಇತ್ತು. ಸಮಾಜಕ್ಕೆ ಅವರ ಕೊಡುಗೆ ವರ್ಣನಾತೀತ ಎಂದರು.</p>.<p>ಗ್ರಾಮದ ಪ್ರಮುಖರಾದ ಮಲ್ಲಿಕಾರ್ಜುನ ಚಲುವಾ, ವೀರಶೆಟ್ಟಿ ಪಾಟೀಲ, ಉಮಾಕಾಂತ ಪ್ರಭಾ, ರಮೇಶ ಪ್ರಭಾ, ಧನರಾಜ ಪಾಟೀಲ, ಬಸಯ್ಯ ಸ್ವಾಮಿ, ರಾಜಕುಮಾರ ಪಾಟೀಲ, ಅನಿಲ್ ಬಾಳೂರೆ, ಕಾಶೀನಾಥ ಧರ್ಮಣ್ಣ, ರಾಜು ಕುಂಬಾರ, ಶೇಷಪ್ಪ ಧರ್ಮಣ್ಣ, ರಾಜು ಪ್ರಭಾ, ಅಮರ ಪ್ರಭಾ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ಹಾನಗಲ್ ಕುಮಾರ ಶಿವಯೋಗಿಗಳು ಸಮಾಜಕ್ಕೆ ಮಠಾಧೀಶರನ್ನು ಕೊಟ್ಟರು ಎಂದು ಹೈದರಾಬಾದ್-ಹಲಬರ್ಗಾ-ಶಿವಣಿ ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯ ನುಡಿದರು.</p>.<p>ತಾಲ್ಲೂಕಿನ ಹಲಬರ್ಗಾ ಗ್ರಾಮದಲ್ಲಿ ನಡೆದ ಹಾನಗಲ್ ಕುಮಾರೇಶ್ವರ ಶಿವಯೋಗಿಗಳ 157ನೇ ಜಯಂತಿ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಸುಂದರ ಸಮಾಜ ಕಟ್ಟುವುದೇ ಅವರ ಧ್ಯೇಯವಾಗಿತ್ತು. ಅದಕ್ಕಾಗಿ ಶಿವಯೋಗ ಮಂದಿರ ಸ್ಥಾಪಿಸಿ, ಅಲ್ಲಿ ಮಠಾಧೀಶರಾಗ ಬಯಸುವವರಿಗೆ ಸಮಾಜಕ್ಕೆ ಮಾರ್ಗದರ್ಶನ ನೀಡುವ ತರಬೇತಿ ನೀಡಿದ್ದರು. ಈಗ ಪ್ರತಿ ಊರಲ್ಲೂ ಮಠಾಧೀಶರನ್ನು ಕಾಣುತ್ತಿರುವುದರ ಶ್ರೇಯ ಶ್ರೀಗಳಿಗೆ ಸಲ್ಲುತ್ತದೆ ಎಂದು ಹೇಳಿದರು. </p>.<p>ಸಮಾಜ ಸಂಘಟನೆಗಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಸ್ಥಾಪಿಸಿದ್ದರು. ಗದುಗಿನ ಪುಣ್ಯಾಶ್ರಮವನ್ನು ಎತ್ತರಕ್ಕೆ ಬೆಳೆಸಿದ್ದರು. ಹಳ್ಳಿ ಹಳ್ಳಿಗಳಿಗೆ ಸಂಚರಿಸಿ ಜನರಲ್ಲಿ ಆಧ್ಯಾತ್ಮದ ಒಲವು ಬೆಳೆಸಿದ್ದರು. ಬಡವರು, ದೀನ- ದಲಿತರ ಬಗ್ಗೆ ಅವರಿಗೆ ಬಹಳ ಕಾಳಜಿ ಇತ್ತು. ಸಮಾಜಕ್ಕೆ ಅವರ ಕೊಡುಗೆ ವರ್ಣನಾತೀತ ಎಂದರು.</p>.<p>ಗ್ರಾಮದ ಪ್ರಮುಖರಾದ ಮಲ್ಲಿಕಾರ್ಜುನ ಚಲುವಾ, ವೀರಶೆಟ್ಟಿ ಪಾಟೀಲ, ಉಮಾಕಾಂತ ಪ್ರಭಾ, ರಮೇಶ ಪ್ರಭಾ, ಧನರಾಜ ಪಾಟೀಲ, ಬಸಯ್ಯ ಸ್ವಾಮಿ, ರಾಜಕುಮಾರ ಪಾಟೀಲ, ಅನಿಲ್ ಬಾಳೂರೆ, ಕಾಶೀನಾಥ ಧರ್ಮಣ್ಣ, ರಾಜು ಕುಂಬಾರ, ಶೇಷಪ್ಪ ಧರ್ಮಣ್ಣ, ರಾಜು ಪ್ರಭಾ, ಅಮರ ಪ್ರಭಾ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>