<p><strong>ಸುರಪುರ</strong>: ‘ಗುರುಮಠಕಲ್ ಪಟ್ಟಣದ ಬಿಸಿಎಂ ವಸತಿ ನಿಲಯದ ವಿದ್ಯಾರ್ಥಿನಿ ಸ್ವಾತಿ ಶರಣಗೌಡ ಅವರ ಸಾವಿನ ಬಗ್ಗೆ ತನಿಖೆಯಾಗಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ)ಯ ಮುಖಂಡರು ಸೋಮವಾರ ತಹಶೀಲ್ದಾರ್ ಮಲ್ಲಯ್ಯ ದಂಡು ಅವರಿಗೆ ಸಲ್ಲಿಸಿದರು.</p>.<p>ಈ ವೇಳೆ ರಾಜ್ಯ ಸಮಿತಿಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ‘ಪಿಯುಸಿ ದ್ವಿತೀಯ ವರ್ಷ ಓದುತ್ತಿದ್ದ ಸ್ವಾತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ. ಕೊಲೆ ಎಂಬ ಶಂಕೆ ಇದೆ. ಕಾರಣ ಈ ಕುರಿತು ಸಮಗ್ರ ತನಿಖೆಯಾಗಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಕುಟುಂಬಸ್ಥರಿಗೆ ಸೂಕ್ತ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಸಂಚಾಲಕಿ ಸರಿತಾ ಶರ್ಮಾ ಮಾತನಾಡಿ, ‘ಜಿಲ್ಲೆಯ ಎಲ್ಲ ವಸತಿ ನಿಲಯಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಮೇಲ್ವಿಚಾರಕರು ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವರ್ಗಾವಣೆ ಆದರೂ ಜನಪ್ರತಿನಿಧಿಗಳ ನೆರವಿನಿಂದ ಅದೇ ಸ್ಥಳದಲ್ಲಿ ಮುಂದುವರಿಯುತ್ತಾರೆ. ಇದು ವಿದ್ಯಾರ್ಥಿನಿಯರ ಮೇಲಿನ ದೌರ್ಜನಕ್ಕೆ ಕಾರಣವಾಗುವ ಸಾಧ್ಯತೆಗಳಿವೆ. ಸ್ವಾತಿ ಪ್ರಕರಣದಲ್ಲಿ ಈ ಅಂಶವೂ ಕಾರಣವಾಗಿರುವ ಸಂದೇಹವಿದೆ’ ಎಂದರು.</p>.<p>‘ಪ್ರತಿ ಮೂರು ವರ್ಷಕ್ಕೆ ಒಮ್ಮೆ ಕಡ್ಡಾಯವಾಗಿ ಎಲ್ಲ ವಸತಿ ನಿಲಯಗಳ ಮೇಲ್ವಿಚಾರಕರನ್ನು ವರ್ಗಾವಣೆ ಮಾಡಬೇಕು. ಸ್ವಾತಿ ಇದ್ದ ವಸತಿ ನಿಲಯದ ಮೇಲ್ವಿಚಾರಕರನ್ನು ತೀವ್ರ ವಿಚಾರಣೆಗೆ ಒಳಪಡಿಸಬೇಕು. ನಿರ್ಲಕ್ಷ್ಯ ತೋರಿದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಈ ವೇಳೆ ಮಲ್ಲಿಕಾರ್ಜುನ ತಳ್ಳಳ್ಳಿ, ಮೂರ್ತಿ ಬೊಮ್ಮನಳ್ಳಿ, ಬಸವರಾಜ ದೊಡ್ಡಮನಿ ಶೆಳ್ಳಗಿ, ಖಾಜಾ ಹುಸೇನ ಗುಡಗುಂಟಿ, ಮಲ್ಲಿಕಾರ್ಜುನ ಬಡಿಗೇರ, ಮಹೇಶ ಸುಂಗಲಕರ, ಸಣ್ಣತಿಪ್ಪಣ್ಣ ಭಂಡಾರಿ, ಹುಲಗಪ್ಪ ಜಾಂಗೀರ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ‘ಗುರುಮಠಕಲ್ ಪಟ್ಟಣದ ಬಿಸಿಎಂ ವಸತಿ ನಿಲಯದ ವಿದ್ಯಾರ್ಥಿನಿ ಸ್ವಾತಿ ಶರಣಗೌಡ ಅವರ ಸಾವಿನ ಬಗ್ಗೆ ತನಿಖೆಯಾಗಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ)ಯ ಮುಖಂಡರು ಸೋಮವಾರ ತಹಶೀಲ್ದಾರ್ ಮಲ್ಲಯ್ಯ ದಂಡು ಅವರಿಗೆ ಸಲ್ಲಿಸಿದರು.</p>.<p>ಈ ವೇಳೆ ರಾಜ್ಯ ಸಮಿತಿಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ‘ಪಿಯುಸಿ ದ್ವಿತೀಯ ವರ್ಷ ಓದುತ್ತಿದ್ದ ಸ್ವಾತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ. ಕೊಲೆ ಎಂಬ ಶಂಕೆ ಇದೆ. ಕಾರಣ ಈ ಕುರಿತು ಸಮಗ್ರ ತನಿಖೆಯಾಗಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಕುಟುಂಬಸ್ಥರಿಗೆ ಸೂಕ್ತ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಸಂಚಾಲಕಿ ಸರಿತಾ ಶರ್ಮಾ ಮಾತನಾಡಿ, ‘ಜಿಲ್ಲೆಯ ಎಲ್ಲ ವಸತಿ ನಿಲಯಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಮೇಲ್ವಿಚಾರಕರು ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವರ್ಗಾವಣೆ ಆದರೂ ಜನಪ್ರತಿನಿಧಿಗಳ ನೆರವಿನಿಂದ ಅದೇ ಸ್ಥಳದಲ್ಲಿ ಮುಂದುವರಿಯುತ್ತಾರೆ. ಇದು ವಿದ್ಯಾರ್ಥಿನಿಯರ ಮೇಲಿನ ದೌರ್ಜನಕ್ಕೆ ಕಾರಣವಾಗುವ ಸಾಧ್ಯತೆಗಳಿವೆ. ಸ್ವಾತಿ ಪ್ರಕರಣದಲ್ಲಿ ಈ ಅಂಶವೂ ಕಾರಣವಾಗಿರುವ ಸಂದೇಹವಿದೆ’ ಎಂದರು.</p>.<p>‘ಪ್ರತಿ ಮೂರು ವರ್ಷಕ್ಕೆ ಒಮ್ಮೆ ಕಡ್ಡಾಯವಾಗಿ ಎಲ್ಲ ವಸತಿ ನಿಲಯಗಳ ಮೇಲ್ವಿಚಾರಕರನ್ನು ವರ್ಗಾವಣೆ ಮಾಡಬೇಕು. ಸ್ವಾತಿ ಇದ್ದ ವಸತಿ ನಿಲಯದ ಮೇಲ್ವಿಚಾರಕರನ್ನು ತೀವ್ರ ವಿಚಾರಣೆಗೆ ಒಳಪಡಿಸಬೇಕು. ನಿರ್ಲಕ್ಷ್ಯ ತೋರಿದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಈ ವೇಳೆ ಮಲ್ಲಿಕಾರ್ಜುನ ತಳ್ಳಳ್ಳಿ, ಮೂರ್ತಿ ಬೊಮ್ಮನಳ್ಳಿ, ಬಸವರಾಜ ದೊಡ್ಡಮನಿ ಶೆಳ್ಳಗಿ, ಖಾಜಾ ಹುಸೇನ ಗುಡಗುಂಟಿ, ಮಲ್ಲಿಕಾರ್ಜುನ ಬಡಿಗೇರ, ಮಹೇಶ ಸುಂಗಲಕರ, ಸಣ್ಣತಿಪ್ಪಣ್ಣ ಭಂಡಾರಿ, ಹುಲಗಪ್ಪ ಜಾಂಗೀರ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>