<p><strong>ವಡಗೇರಾ:</strong> ‘ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ವಡಗೇರಾ ತಾಲ್ಲೂಕಿನ ಸಂಗಮೇಶ್ವರ ಮಠದ ಪೀಠಾಧಿಪತಿ ಕರುಣೇಶ್ವರ ಶಿವಾಚಾರ್ಯರು ಆಗ್ರಹಿಸಿದ್ದಾರೆ.</p>.<p>ಅತಿ ಹೆಚ್ಚು ಯುವಕರೇ ಮದ್ಯಪಾನದ ಚಟಕ್ಕೆ ದಾಸರಾಗುತ್ತಿದ್ದಾರೆ. ಕುಡಿತದ ಚಟದಿಂದಾಗಿ ಅನೇಕ ಯುವಕರು ಅಕಾಲಿಕ ಮರಣ ಹೊಂದುತ್ತಿದ್ದಾರೆ ಜತೆಗೆ ಕುಟುಂಬಗಳು ಸಹ ಬೀದಿಪಾಲು ಆಗುತ್ತಿವೆ.</p>.<p>ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಗುರುವಾರ ಮೂವರು ಯುವಕರು ಕುಡಿದ ನಶೆಯಲ್ಲಿ ರೈಲ್ವೆ ಹಳಿಯ ಮೇಲೆ ಮಲಗಿ ಮೃತಪಟ್ಟಿದ್ದಾರೆ. ಈ ಘಟನೆಯು ಮನ ಕುಲುಕುವಂತಾಗಿದೆ. ಕೂಡಲೇ ಸರ್ಕಾರ ಮದ್ಯಪಾನ ನಿಷೇಧಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಈಗಾಗಲೇ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಗಳ ರೀತಿಯಲ್ಲಿ ಮದ್ಯ ಮಾರಾಟ ನಿಷೇಧ ಗ್ಯಾರಂಟಿ ಯೋಜನೆ ಜಾರಿಗೆ ತರಬೇಕು. ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಮಾತ್ರ ಮದ್ಯ ಮಾರಾಟ ನಿಷೇಧ ಕುರಿತು ಸದನದಲ್ಲಿ ಚರ್ಚೆ ಮಾಡದಿರುವುದು ದುರಾದೃಷ್ಟಕರ ಸಂಗತಿಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ಈಗ ಅಧಿವೇಶನ ಆರಂಭವಾಗಿದ್ದು, ಮದ್ಯ ಮಾರಾಟ ನಿಷೇಧ ಮಾಡುವ ಬಗ್ಗೆ ಜನ ಪ್ರತಿನಿಧಿಗಳು ಚರ್ಚೆ ಮಾಡುಬೇಕು. ಹಾಗೆಯೇ ಮದ್ಯ ಮಾರಾಟ ನಿಷೇಧ ಮಾಡಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕಬೇಕು ಎಂದು ಕರುಣೇಶ್ವರ ಸ್ವಾಮೀಜಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong> ‘ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ವಡಗೇರಾ ತಾಲ್ಲೂಕಿನ ಸಂಗಮೇಶ್ವರ ಮಠದ ಪೀಠಾಧಿಪತಿ ಕರುಣೇಶ್ವರ ಶಿವಾಚಾರ್ಯರು ಆಗ್ರಹಿಸಿದ್ದಾರೆ.</p>.<p>ಅತಿ ಹೆಚ್ಚು ಯುವಕರೇ ಮದ್ಯಪಾನದ ಚಟಕ್ಕೆ ದಾಸರಾಗುತ್ತಿದ್ದಾರೆ. ಕುಡಿತದ ಚಟದಿಂದಾಗಿ ಅನೇಕ ಯುವಕರು ಅಕಾಲಿಕ ಮರಣ ಹೊಂದುತ್ತಿದ್ದಾರೆ ಜತೆಗೆ ಕುಟುಂಬಗಳು ಸಹ ಬೀದಿಪಾಲು ಆಗುತ್ತಿವೆ.</p>.<p>ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಗುರುವಾರ ಮೂವರು ಯುವಕರು ಕುಡಿದ ನಶೆಯಲ್ಲಿ ರೈಲ್ವೆ ಹಳಿಯ ಮೇಲೆ ಮಲಗಿ ಮೃತಪಟ್ಟಿದ್ದಾರೆ. ಈ ಘಟನೆಯು ಮನ ಕುಲುಕುವಂತಾಗಿದೆ. ಕೂಡಲೇ ಸರ್ಕಾರ ಮದ್ಯಪಾನ ನಿಷೇಧಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಈಗಾಗಲೇ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಗಳ ರೀತಿಯಲ್ಲಿ ಮದ್ಯ ಮಾರಾಟ ನಿಷೇಧ ಗ್ಯಾರಂಟಿ ಯೋಜನೆ ಜಾರಿಗೆ ತರಬೇಕು. ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಮಾತ್ರ ಮದ್ಯ ಮಾರಾಟ ನಿಷೇಧ ಕುರಿತು ಸದನದಲ್ಲಿ ಚರ್ಚೆ ಮಾಡದಿರುವುದು ದುರಾದೃಷ್ಟಕರ ಸಂಗತಿಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ಈಗ ಅಧಿವೇಶನ ಆರಂಭವಾಗಿದ್ದು, ಮದ್ಯ ಮಾರಾಟ ನಿಷೇಧ ಮಾಡುವ ಬಗ್ಗೆ ಜನ ಪ್ರತಿನಿಧಿಗಳು ಚರ್ಚೆ ಮಾಡುಬೇಕು. ಹಾಗೆಯೇ ಮದ್ಯ ಮಾರಾಟ ನಿಷೇಧ ಮಾಡಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕಬೇಕು ಎಂದು ಕರುಣೇಶ್ವರ ಸ್ವಾಮೀಜಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>