‘ಕೇಂದ್ರ ಸರ್ಕಾರವಂತೂ ಸಂಸತ್ತಿನಲ್ಲಿ ತಮಗಿರುವ ಬಹುಮತದ ದುರ್ಲಾಭ ಪಡೆದುಕೊಂಡು, ರೈಲ್ವೆ, ಭದ್ರತಾ ವಲಯ, ವಿದ್ಯುತ್, ಬ್ಯಾಂಕಿಂಗ್, ಕಲ್ಲಿದ್ದಲು, ಪೆಟ್ರೋಲಿಯಂ, ಉಕ್ಕು, ಬಿಎಸ್ಎನ್ಎಲ್, ವಿಮಾನ ನಿಲ್ದಾಣ, ರಸ್ತೆ ಸಾರಿಗೆ ಸೇರಿದಂತೆ ಇನ್ನಷ್ಟು ವೇಗವಾಗಿ ಸಾರ್ವಜನಿಕ ವಲಯದ ಮತ್ತು ಸರ್ಕಾರಿ ವಲಯದ ಉದ್ದಿಮೆಗಳನ್ನು ಕೇಂದ್ರ ಸರ್ಕಾರ ಖಾಸಗೀಕರಣ ಮಾಡುತ್ತಿದೆ. ಈ ಮೂಲಕ ದುಡಿಯುವ ಜನರ ಮೇಲೆ ಗದಾಪ್ರಹಾರ ಮಾಡುತ್ತಿದೆ. ಆದ್ದರಿಂದ ದುಡಿಯುವ ಜನತೆ ಪ್ರಬಲ ಚಳವಳಿಗೆ ಮುಂದಾಗಬೇಕಿದೆ‘ ಎಂದರು.