ಬಿಜೆಪಿಯಲ್ಲಿ ಪ್ರಾಮಾಣಿಕ, ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ. ಪಕ್ಷದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ವಿಷಯ ತಿಳಿಸುವುದಿಲ್ಲ. ಅಧ್ಯಕ್ಷ ಸ್ಥಾನಕ್ಕೆ ಬೆಲೆ ಸಿಗುತ್ತಿಲ್ಲ. ಅಧಿಕಾರದಲ್ಲಿರುವ ಸ್ಥಳೀಯ ನಾಯಕರ ನಡೆಗೆ ಬೇಸತ್ತು, ಮನನೊಂದು ಸ್ವಇಚ್ಚೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.