<p><strong>ವಡಗೇರಾ:</strong> ಹೋಬಳಿ ಕೇಂದ್ರವಿದ್ದ ವಡಗೇರಾ, ತಾಲ್ಲೂಕು ಕೇಂದ್ರ ಎಂದು ಘೋಷಣೆಯಾಗಿ 8 ವರ್ಷ ಕಳೆದರೂ ಸಹ ಈವರೆಗೆ ತಾಲ್ಲೂಕಿನಲ್ಲಿ ತಾಲ್ಲೂಕು ಕಚೇರಿಗಳು ಆರಂಭವಾಗಿಲ್ಲ. ಇದರಿಂದ ತಾಲ್ಲೂಕಿನಲ್ಲಿ ಅಭಿವೃದ್ದಿ ಮರೀಚಿಕೆಯಾಗಿದೆ.</p>.<p>ಹೋಬಳಿ ಕೇಂದ್ರವಿದ್ದಾಗ ವಡಗೇರಾ ಹೇಗಿತ್ತೊ ಈಗಲೂ ಹಾಗೆಯೇ ಇದೆ. ಯಾವುದೇ ಬದಲಾವಣೆಗಳು ತಾಲ್ಲೂಕಿನಲ್ಲಿ ಕಂಡು ಬಂದಿಲ್ಲ. ಹೋಬಳಿ ಕೇಂದ್ರವಿದ್ದಾಗ ಅಲ್ಪ ಸ್ವಲ್ಪವಾದರೂ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿತ್ತು.</p>.<p>ನೂತನ ತಾಲ್ಲೂಕಿನಲ್ಲಿ ಸುಮಾರು 22 ತಾಲ್ಲೂಕು ಕಚೇರಿಗಳು ಆರಂಭವಾಗಬೇಕು. ಆದರೆ, ಕೇವಲ ಮೂರು ತಾಲ್ಲೂಕು ಕಚೇರಿಗಳು ಆರಂಭವಾಗಿದೆ. ತಹಶೀಲ್ದಾರ್ ಕಚೇರಿ, ತಾ.ಪಂ ಕಚೇರಿ ಹಾಗೂ ಕೃಷಿ ಇಲಾಖೆ. ಇದನ್ನು ಹೊರತು ಪಡಿಸಿ ಬೇರೆ ಯಾವ ಕಚೇರಿಯೂ ತಾಲ್ಲೂಕು ಕೇಂದ್ರದಲ್ಲಿ ಆರಂಭವಾಗಿಲ್ಲ.</p>.<p><strong>ಉನ್ನತ ಶಿಕ್ಷಣದಿಂದ ವಂಚಿತ: </strong>ನೂತನ ತಾಲ್ಲೂಕಿನಲ್ಲಿ ಪದವಿಪೂರ್ವ, ಪದವಿ ಹಾಗೂ ಇನ್ನಿತರ ತಾಂತ್ರಿಕ ಕಾಲೇಜುಗಳು ಆರಂಭಗೊಂಡಿಲ್ಲ. ಹೀಗಾಗಿ ಇಲ್ಲಿನ ಬಡ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗುತಿದ್ದಾರೆ.</p>.<p><strong>ರೈತರ ಪರಿಸ್ಥಿತಿ ಅಯೋಮಯ:</strong> ಇನ್ನೂ ಇಲ್ಲಿನ ರೈತರ ಪರಿಸ್ಥಿತಿ ಕೇಳುವಂತಿಲ್ಲ. ಈ ಭಾಗದಲ್ಲಿನ ನೀರಾವರಿ ಕಾಲುವೆಗಳು ಹೆಸರಿಗೆ ಮಾತ್ರ ಇದ್ದಂತಿದೆ. ಕೊನೆ ಅಂಚಿನ ಗ್ರಾಮಗಳ ರೈತರ ಜಮೀನುಗಳಿಗೆ ಕಾಲುವೆ ಮೂಲಕ ನೀರು ಹರಿಯದೆ ಇರುವುದರಿಂದ ಹೊಲಗಳಲ್ಲಿ ಬೆಳೆದ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ.</p>.<p>ಇದರಿಂದಾಗಿ ಸಾಲ ಮಾಡಿ, ದುಬಾರಿ ಬೆಲೆಯ ಬೀಜಗಳನ್ನು ತಂದು ಬಿತ್ತನೆಯನ್ನು ಮಾಡುತ್ತಾರೆ. ಇಲ್ಲಿನ ಅನೇಕ ರೈತರು ಸಾಲದ ಸುಳಿಯಲ್ಲಿ ಸಿಲುಕಿ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳನ್ನು ಕಾಣಬಹುದಾಗಿದೆ.</p>.<p><strong>ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಒತ್ತಾಯ:</strong></p>.<p>ಬಹು ದಿನದ ಬೇಡಿಕೆಯಾದ ಇಲ್ಲಿನ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಉನ್ನತಿಕರಿಸಬೇಕು ಎಂದು ಅನೇಕ ವರ್ಷಗಳಿಂದ ಇಲ್ಲಿನ ಸಂಘ–ಸಂಸ್ಥೆಗಳು, ಸಾರ್ವಜನಿಕರು ಹೋರಾಟಗಳನ್ನು ಮಾಡಿದ್ದಾರೆ. ಆದರೆ ಅವರ ಹೋರಾಟಗಳಿಗೆ ಈವರೆಗೆ ಫಲ ಸಿಕ್ಕಿಲ್ಲ.</p>.<p>ಮುಖ್ಯಮಂತ್ರಿಗಳು ನೂತನ ತಾಲ್ಲೂಕು ವಡಗೇರಾದ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದರ ಜೊತೆಗೆ ತಾಲ್ಲೂಕು ಕಚೇರಿಗಳನ್ನು ಆರಂಭಿಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.</p>.<div><blockquote>ವಡಗೇರಾದಲ್ಲಿ ಈವರೆಗೆ ತಾಲ್ಲೂಕು ಕಚೇರಿಗಳು ಆರಂಭಗೊಂಡಿಲ್ಲ. ಇದರಿಂದ ಅಭಿವೃದ್ಧಿ ಕುಂಟಿತವಾಗಿದೆ. ಕೂಡಲೇ ತಾಲ್ಲೂಕು ಕಚೇರಿಗಳನ್ನು ಆರಂಭಿಸಲು ಕೈಗೊಳ್ಳಬೇಕು.</blockquote><span class="attribution">ಸಿದ್ದಣ್ಣಗೌಡ ಕಾಡಂನೋರ, ಬಿಜೆಪಿ ಮುಖಂಡ</span></div>.<div><blockquote>ವಡಗೇರಾದಲ್ಲಿ ತಾಲ್ಲೂಕು ಕಚೇರಿಗಳು ಇಲ್ಲದಿರುವ ಕಾರಣ ದೂರದ ಶಹಾಪುರಕ್ಕೆ ಹೋಗುವುದು ಅನಿವಾರ್ಯವಾಗಿದೆ. ಇದರಿಂದ ಸಮಯದ ಜತೆ ಹಣವು ಖರ್ಚಾಗುತ್ತಿದೆ. ಹಣಮಂತ ಬಸಂತಪೂರ ವಿದ್ಯಾರ್ಥಿ</blockquote><span class="attribution">ಹಣಮಂತ ಬಸಂತಪೂರ ವಿದ್ಯಾರ್ಥಿ</span></div>.<p>ತುರ್ತು ಬೇಕಾದ ತಾಲ್ಲೂಕು ಕಚೇರಿಗಳು ನೂತನ ತಾಲ್ಲೂಕು ವಡಗೇರಾ ಅಭಿವೃದ್ಧಿ ಹೊಂದಬೇಕಾದರೆ ನೋಂದಣಿ ಬಿಇಒ ಲೋಕೋಪಯೋಗಿ ಸಮಾಜ ಕಲ್ಯಾಣ ಕಚೇರಿಗಳು ಆರಂಭವಾಗಬೇಕು. ಈ ಕಚೇರಿಗಳು ವಡಗೇರಾ ಪಟ್ಟಣದಲ್ಲಿ ಇಲ್ಲದ ಕಾರಣ ಹಳೆಯ ತಾಲ್ಲೂಕು ಶಹಾಪುರಕ್ಕೆ ಹೋಗುವುದು ಸಾರ್ವಜನಿಕರಿಗೆ ಅನಿವಾರ್ಯವಾಗಿದೆ. ಇದರಿಂದಾಗಿ ರೈತರು ಸಾರ್ವಜನಿಕರು ಹಾಗೂ ಶಿಕ್ಷಕರ ಸಮಯದ ಜತೆಗೆ ಹಣವು ಪೋಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong> ಹೋಬಳಿ ಕೇಂದ್ರವಿದ್ದ ವಡಗೇರಾ, ತಾಲ್ಲೂಕು ಕೇಂದ್ರ ಎಂದು ಘೋಷಣೆಯಾಗಿ 8 ವರ್ಷ ಕಳೆದರೂ ಸಹ ಈವರೆಗೆ ತಾಲ್ಲೂಕಿನಲ್ಲಿ ತಾಲ್ಲೂಕು ಕಚೇರಿಗಳು ಆರಂಭವಾಗಿಲ್ಲ. ಇದರಿಂದ ತಾಲ್ಲೂಕಿನಲ್ಲಿ ಅಭಿವೃದ್ದಿ ಮರೀಚಿಕೆಯಾಗಿದೆ.</p>.<p>ಹೋಬಳಿ ಕೇಂದ್ರವಿದ್ದಾಗ ವಡಗೇರಾ ಹೇಗಿತ್ತೊ ಈಗಲೂ ಹಾಗೆಯೇ ಇದೆ. ಯಾವುದೇ ಬದಲಾವಣೆಗಳು ತಾಲ್ಲೂಕಿನಲ್ಲಿ ಕಂಡು ಬಂದಿಲ್ಲ. ಹೋಬಳಿ ಕೇಂದ್ರವಿದ್ದಾಗ ಅಲ್ಪ ಸ್ವಲ್ಪವಾದರೂ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿತ್ತು.</p>.<p>ನೂತನ ತಾಲ್ಲೂಕಿನಲ್ಲಿ ಸುಮಾರು 22 ತಾಲ್ಲೂಕು ಕಚೇರಿಗಳು ಆರಂಭವಾಗಬೇಕು. ಆದರೆ, ಕೇವಲ ಮೂರು ತಾಲ್ಲೂಕು ಕಚೇರಿಗಳು ಆರಂಭವಾಗಿದೆ. ತಹಶೀಲ್ದಾರ್ ಕಚೇರಿ, ತಾ.ಪಂ ಕಚೇರಿ ಹಾಗೂ ಕೃಷಿ ಇಲಾಖೆ. ಇದನ್ನು ಹೊರತು ಪಡಿಸಿ ಬೇರೆ ಯಾವ ಕಚೇರಿಯೂ ತಾಲ್ಲೂಕು ಕೇಂದ್ರದಲ್ಲಿ ಆರಂಭವಾಗಿಲ್ಲ.</p>.<p><strong>ಉನ್ನತ ಶಿಕ್ಷಣದಿಂದ ವಂಚಿತ: </strong>ನೂತನ ತಾಲ್ಲೂಕಿನಲ್ಲಿ ಪದವಿಪೂರ್ವ, ಪದವಿ ಹಾಗೂ ಇನ್ನಿತರ ತಾಂತ್ರಿಕ ಕಾಲೇಜುಗಳು ಆರಂಭಗೊಂಡಿಲ್ಲ. ಹೀಗಾಗಿ ಇಲ್ಲಿನ ಬಡ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗುತಿದ್ದಾರೆ.</p>.<p><strong>ರೈತರ ಪರಿಸ್ಥಿತಿ ಅಯೋಮಯ:</strong> ಇನ್ನೂ ಇಲ್ಲಿನ ರೈತರ ಪರಿಸ್ಥಿತಿ ಕೇಳುವಂತಿಲ್ಲ. ಈ ಭಾಗದಲ್ಲಿನ ನೀರಾವರಿ ಕಾಲುವೆಗಳು ಹೆಸರಿಗೆ ಮಾತ್ರ ಇದ್ದಂತಿದೆ. ಕೊನೆ ಅಂಚಿನ ಗ್ರಾಮಗಳ ರೈತರ ಜಮೀನುಗಳಿಗೆ ಕಾಲುವೆ ಮೂಲಕ ನೀರು ಹರಿಯದೆ ಇರುವುದರಿಂದ ಹೊಲಗಳಲ್ಲಿ ಬೆಳೆದ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ.</p>.<p>ಇದರಿಂದಾಗಿ ಸಾಲ ಮಾಡಿ, ದುಬಾರಿ ಬೆಲೆಯ ಬೀಜಗಳನ್ನು ತಂದು ಬಿತ್ತನೆಯನ್ನು ಮಾಡುತ್ತಾರೆ. ಇಲ್ಲಿನ ಅನೇಕ ರೈತರು ಸಾಲದ ಸುಳಿಯಲ್ಲಿ ಸಿಲುಕಿ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳನ್ನು ಕಾಣಬಹುದಾಗಿದೆ.</p>.<p><strong>ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಒತ್ತಾಯ:</strong></p>.<p>ಬಹು ದಿನದ ಬೇಡಿಕೆಯಾದ ಇಲ್ಲಿನ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಉನ್ನತಿಕರಿಸಬೇಕು ಎಂದು ಅನೇಕ ವರ್ಷಗಳಿಂದ ಇಲ್ಲಿನ ಸಂಘ–ಸಂಸ್ಥೆಗಳು, ಸಾರ್ವಜನಿಕರು ಹೋರಾಟಗಳನ್ನು ಮಾಡಿದ್ದಾರೆ. ಆದರೆ ಅವರ ಹೋರಾಟಗಳಿಗೆ ಈವರೆಗೆ ಫಲ ಸಿಕ್ಕಿಲ್ಲ.</p>.<p>ಮುಖ್ಯಮಂತ್ರಿಗಳು ನೂತನ ತಾಲ್ಲೂಕು ವಡಗೇರಾದ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದರ ಜೊತೆಗೆ ತಾಲ್ಲೂಕು ಕಚೇರಿಗಳನ್ನು ಆರಂಭಿಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.</p>.<div><blockquote>ವಡಗೇರಾದಲ್ಲಿ ಈವರೆಗೆ ತಾಲ್ಲೂಕು ಕಚೇರಿಗಳು ಆರಂಭಗೊಂಡಿಲ್ಲ. ಇದರಿಂದ ಅಭಿವೃದ್ಧಿ ಕುಂಟಿತವಾಗಿದೆ. ಕೂಡಲೇ ತಾಲ್ಲೂಕು ಕಚೇರಿಗಳನ್ನು ಆರಂಭಿಸಲು ಕೈಗೊಳ್ಳಬೇಕು.</blockquote><span class="attribution">ಸಿದ್ದಣ್ಣಗೌಡ ಕಾಡಂನೋರ, ಬಿಜೆಪಿ ಮುಖಂಡ</span></div>.<div><blockquote>ವಡಗೇರಾದಲ್ಲಿ ತಾಲ್ಲೂಕು ಕಚೇರಿಗಳು ಇಲ್ಲದಿರುವ ಕಾರಣ ದೂರದ ಶಹಾಪುರಕ್ಕೆ ಹೋಗುವುದು ಅನಿವಾರ್ಯವಾಗಿದೆ. ಇದರಿಂದ ಸಮಯದ ಜತೆ ಹಣವು ಖರ್ಚಾಗುತ್ತಿದೆ. ಹಣಮಂತ ಬಸಂತಪೂರ ವಿದ್ಯಾರ್ಥಿ</blockquote><span class="attribution">ಹಣಮಂತ ಬಸಂತಪೂರ ವಿದ್ಯಾರ್ಥಿ</span></div>.<p>ತುರ್ತು ಬೇಕಾದ ತಾಲ್ಲೂಕು ಕಚೇರಿಗಳು ನೂತನ ತಾಲ್ಲೂಕು ವಡಗೇರಾ ಅಭಿವೃದ್ಧಿ ಹೊಂದಬೇಕಾದರೆ ನೋಂದಣಿ ಬಿಇಒ ಲೋಕೋಪಯೋಗಿ ಸಮಾಜ ಕಲ್ಯಾಣ ಕಚೇರಿಗಳು ಆರಂಭವಾಗಬೇಕು. ಈ ಕಚೇರಿಗಳು ವಡಗೇರಾ ಪಟ್ಟಣದಲ್ಲಿ ಇಲ್ಲದ ಕಾರಣ ಹಳೆಯ ತಾಲ್ಲೂಕು ಶಹಾಪುರಕ್ಕೆ ಹೋಗುವುದು ಸಾರ್ವಜನಿಕರಿಗೆ ಅನಿವಾರ್ಯವಾಗಿದೆ. ಇದರಿಂದಾಗಿ ರೈತರು ಸಾರ್ವಜನಿಕರು ಹಾಗೂ ಶಿಕ್ಷಕರ ಸಮಯದ ಜತೆಗೆ ಹಣವು ಪೋಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>