ಶಹಾಪುರ: ವಡಗೇರಾ ತಾಲ್ಲೂಕಿನ ತಡಿಬಿಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯ ನಡುವೆ ಶಾಲೆಯ ಸಹ ಶಿಕ್ಷಕಿ ಪಾರ್ವತಿ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನಿಯೋಜನೆ ಮೇಲೆ ಕಳುಹಿಸಲಾಗಿದ್ದು, ಅವರನ್ನು ಮೂಲ ಹುದ್ದೆಯಲ್ಲಿಯೇ ಮುಂದುವರೆಸುವಂತೆ ಪತ್ರ ಬರೆಯಲಾಗುವುದು ಎಂದು ಬಿಇಒ ಶಿಬಾ ಜಲಿಯನ್ ತಿಳಿಸಿದ್ದಾರೆ.