ಲೋಕಸಭಾ ಚುನಾವಣೆಗೆ ಬಸವಂತ್ರಾಯಗೌಡ ಅವರನ್ನು ಎಪಿಆರ್ಓ ಎಂದು ಚುನಾವಣಾ ಕಾರ್ಯಕ್ಕೆ ನಿಯೋಜಿಸಿ ಆದೇಶ ಮಾಡಲಾಗಿತ್ತು. ಆದರೆ, ಮಾರ್ಚ್ 14ರಿಂದ ಅನಧಿಕೃತ ಗೈರು ಹಾಜರಾಗಿದ್ದು, ಎಪಿಆರ್ಓ ಆದೇಶ ಪತ್ರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಕನ ಮನೆ ವಿಳಾಸ, ಫೋನ್ ನಂಬರ್ ಸಂಪರ್ಕಿಸಿದರೂ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಬೇಜವಾಬ್ದಾರಿತನ ಹಾಗೂ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.