ಯಾದಗಿರಿಯಲ್ಲಿ ಶನಿವಾರ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾತ್ಮಕ ಸಭೆಯಲ್ಲಿ ಪಾಲ್ಗೊಂಡಿದ್ದ ಶಿಕ್ಷಕರು
ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರ್ಥಿಕ ಸಬಲೀಕರಣ ಮಾಡಿ ಎಲ್ಲ ಬಗೆಯ ಸವಲತ್ತುಗಳನ್ನು ನೀಡಿ ಪೋಷಕರು ತಮ್ಮ ಜವಾಬ್ದಾರಿ ತೋರಿದಾಗ ಫಲಿತಾಂಶ ಸುಧಾರಣೆ ಕಾಣುತ್ತದೆ
ಚೇತನ್ ಸಂಘದ ರಾಜ್ಯ ಕಾರ್ಯದರ್ಶಿ
ವಿಭಾಗ ಮಟ್ಟದಲ್ಲಿ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿದುಕೊಂಡು ಅವುಗಳನ್ನು ಪರಿಹರಿಸಬೇಕು
ಮಲ್ಲಯ್ಯ ಗುತ್ತೇದಾರ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ
‘ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದನೆ’
‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವ ಕೆಲಸವನ್ನು ಮಾಡಿದೆ. ಸರ್ಕಾರ ಮಾಡಿರುವ ಕೆಲಸವನ್ನು ಶಿಕ್ಷಕರೂ ಮರೆಯಬಾರದರು’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು. ‘ಶೈಕ್ಷಣಿಕ ಪ್ರಗತಿಯಲ್ಲಿ ಹಿಂದಿರುವ ಯಾದಗಿರಿ ಜಿಲ್ಲೆಯನ್ನು ಮೇಲೆ ತರುವ ಪ್ರಯತ್ನಕ್ಕೆ ಅಧಿಕಾರಿಗಳು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸ್ಪಂದಿಸಬೇಕು’ ಎಂದು ಹೇಳಿದರು.