<p><strong>ಯಾದಗಿರಿ:</strong> ಜಿಲ್ಲೆಯಲ್ಲಿ ಬುಧವಾರ ಜನಜೀವನ ಎಂದಿನಂತಿತ್ತು. ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಮುಷ್ಕರದ ಬಿಸಿ ಜನರಿಗೆ ತಟ್ಟಲಿಲ್ಲ.</p>.<p>ಶಾಲಾ–ಕಾಲೇಜು, ಸಾರಿಗೆ, ಆಟೊ, ಆಸ್ಪತ್ರೆ, ಸ್ಕ್ಯಾನಿಂಗ್ ಕೇಂದ್ರ, ಅಂಗಡಿ ಮುಂಗಟ್ಟುಗಳಿಗೆ ಮುಷ್ಕರದ ಬಿಸಿ ತಟ್ಟಿಲ್ಲ. ಎಂದಿನಂತೆ ವ್ಯಾಪಾರ ವಹಿವಾಟು ನಡೆಯಿತು.</p>.<p>ಶಾಲಾ–ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಜಮಾಯಿಸಿದ್ದರು. ಎನ್ಈಕೆಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ ಯೂನಿಯನ್ ಮುಷ್ಕರಕ್ಕೆ ಬೆಂಬಲಿಸಿದ್ದರೂ ಸಮಸ್ಯೆಯಾಗಲಿಲ್ಲ.ಮಧ್ಯಾಹ್ನದ ಮೇಲೆ ಬಹುತೇಕ ಪ್ರತಿಭಟನೆಗಳು ಆರಂಭಗೊಂಡಿದ್ದರಿಂದ ಬೆಳಗಿನ ಕೆಲಸಗಳಿಗೆ ಯಾವುದೇ ತೊಂದರೆಯಾಗಲಿಲ್ಲ.</p>.<p>ಎಸ್ಐಬಿ ಬ್ಯಾಂಕ್ ಹೊರತು ಪಡಿಸಿ ಉಳಿದ ಬ್ಯಾಂಕ್ಗಳು ಮುಷ್ಕರದಲ್ಲಿ ಪರೋಕ್ಷವಾಗಿ ಭಾಗಿಯಾಗಿದ್ದವು. ಎಸ್ಬಿಐ ಬ್ಯಾಂಕ್ ಸಿಬ್ಬಂದಿ ಮುಷ್ಕರಕ್ಕೆ ಬಾಹ್ಯ ಬೆಂಬಲ ವ್ಯಕ್ತಪಡಿಸಿದ್ದರು. ಸರ್ಕಾರಿ ಕಚೇರಿಗಳಲ್ಲಿಯೂ ಹಾಜರಾತಿಇತ್ತು. ಜಿಲ್ಲೆಯ ಶಹಾಪುರ, ಸುರಪುರ ನಗರಗಳಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.</p>.<p>ನಂತರ ತಹಶೀಲ್ದಾರ್, ಜಿಲ್ಲಾಧಿಕಾರಿ ಮೂಲಕ ಪ್ರಧಾನಿ, ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.</p>.<p>ನಗರದಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಶುರುವಾದ ಪ್ರತಿಭಟನೆಗಳು ಮಧ್ಯಾಹ್ನ 2 ಗಂಟೆಗೆ ಮುಕ್ತಾಯವಾಯಿತು. ಮುಷ್ಕರದಿಂದ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಉಂಟಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಜಿಲ್ಲೆಯಲ್ಲಿ ಬುಧವಾರ ಜನಜೀವನ ಎಂದಿನಂತಿತ್ತು. ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಮುಷ್ಕರದ ಬಿಸಿ ಜನರಿಗೆ ತಟ್ಟಲಿಲ್ಲ.</p>.<p>ಶಾಲಾ–ಕಾಲೇಜು, ಸಾರಿಗೆ, ಆಟೊ, ಆಸ್ಪತ್ರೆ, ಸ್ಕ್ಯಾನಿಂಗ್ ಕೇಂದ್ರ, ಅಂಗಡಿ ಮುಂಗಟ್ಟುಗಳಿಗೆ ಮುಷ್ಕರದ ಬಿಸಿ ತಟ್ಟಿಲ್ಲ. ಎಂದಿನಂತೆ ವ್ಯಾಪಾರ ವಹಿವಾಟು ನಡೆಯಿತು.</p>.<p>ಶಾಲಾ–ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಜಮಾಯಿಸಿದ್ದರು. ಎನ್ಈಕೆಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ ಯೂನಿಯನ್ ಮುಷ್ಕರಕ್ಕೆ ಬೆಂಬಲಿಸಿದ್ದರೂ ಸಮಸ್ಯೆಯಾಗಲಿಲ್ಲ.ಮಧ್ಯಾಹ್ನದ ಮೇಲೆ ಬಹುತೇಕ ಪ್ರತಿಭಟನೆಗಳು ಆರಂಭಗೊಂಡಿದ್ದರಿಂದ ಬೆಳಗಿನ ಕೆಲಸಗಳಿಗೆ ಯಾವುದೇ ತೊಂದರೆಯಾಗಲಿಲ್ಲ.</p>.<p>ಎಸ್ಐಬಿ ಬ್ಯಾಂಕ್ ಹೊರತು ಪಡಿಸಿ ಉಳಿದ ಬ್ಯಾಂಕ್ಗಳು ಮುಷ್ಕರದಲ್ಲಿ ಪರೋಕ್ಷವಾಗಿ ಭಾಗಿಯಾಗಿದ್ದವು. ಎಸ್ಬಿಐ ಬ್ಯಾಂಕ್ ಸಿಬ್ಬಂದಿ ಮುಷ್ಕರಕ್ಕೆ ಬಾಹ್ಯ ಬೆಂಬಲ ವ್ಯಕ್ತಪಡಿಸಿದ್ದರು. ಸರ್ಕಾರಿ ಕಚೇರಿಗಳಲ್ಲಿಯೂ ಹಾಜರಾತಿಇತ್ತು. ಜಿಲ್ಲೆಯ ಶಹಾಪುರ, ಸುರಪುರ ನಗರಗಳಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.</p>.<p>ನಂತರ ತಹಶೀಲ್ದಾರ್, ಜಿಲ್ಲಾಧಿಕಾರಿ ಮೂಲಕ ಪ್ರಧಾನಿ, ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.</p>.<p>ನಗರದಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಶುರುವಾದ ಪ್ರತಿಭಟನೆಗಳು ಮಧ್ಯಾಹ್ನ 2 ಗಂಟೆಗೆ ಮುಕ್ತಾಯವಾಯಿತು. ಮುಷ್ಕರದಿಂದ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಉಂಟಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>