ಶ್ರಾವಣ ಮಾಸ ಹಿಂದೂಗಳಿಗೆ ಪವಿತ್ರವಾಗಿದೆ. ಈವೇಳೆಕರ್ನಾಟಕ ಸೇರಿದಂತೆ ದೇಶದವಿವಿಧಭಾಗಗಳಿಂದ ಜನರು ಶ್ರೀಶೈಲಂಗೆ ಭೇಟಿ ನೀಡುತ್ತಾರೆ.ಸಪ್ತ ನದಿಗಳ ಸಂಗಮ ಪಾತಾಳಗಂಗೆಯಲ್ಲಿ ಪುಣ್ಯಸ್ನಾನ ಮಾಡಿ ಸಾಕ್ಷಿ ಗಣಪತಿ, ಭ್ರಮರಾಂಭ ಮಲ್ಲಿಕಾರ್ಜುನ ಸ್ವಾಮಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ, ಶಿಖರೇಶ್ವರ ಸೇರಿದಂತೆ ಹಲವಾರು ದೇವಸ್ಥಾನಗಳಿಗೆ ತೆರಳಿ, ದರ್ಶನ ಪಡೆಯುತ್ತಾರೆ. ನಂತರಶ್ರೀಶೈಲಂ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿಯಿಂದ ಆಶೀರ್ವಾದ ತೆಗೆದುಕೊಂಡು ತೆರಳುತ್ತಾರೆ ಎಂದು ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಮುಖ್ಯ ಅರ್ಚಕ ಗುರುಪಾದಯ್ಯಸ್ವಾಮಿ ತಿಳಿಸಿದ್ದಾರೆ.