<p><strong>ವಡಗೇರಾ</strong>: ‘ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಸೇವೆ ಸಲ್ಲಿಸಲು ಐಕೂರು ಗ್ರಾಮದ 30 ಯುವಕರು ತೆರಳಿರುವುದು ಸಂತಸದ ಸಂಗತಿ’ ಎಂದು ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಶರಣಗೌಡ ಐಕೂರು ಹೇಳಿದರು.</p>.<p>ಕೊಪ್ಪಳದ ಗವಿಸಿದ್ದೇಶರ ಜಾತ್ರೆಯಲ್ಲಿ ಪಾಲ್ಗೊಳ್ಳುವ ಜನರ ಅನುಕೂಲಕ್ಕಾಗಿ ದಾಸೋಹಕ್ಕೆ ರೊಟ್ಟಿ ಹಾಗೂ ಜಾತ್ರೆಯಲ್ಲಿ ಸೇವೆ ಸಲ್ಲಿಸಲು ಹೊರಟ ಯುವಕರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಐಕೂರ ಗ್ರಾಮದಿಂದ ಕಳೆದ ಎರಡು ವರ್ಷಗಳಿಂದ ರೊಟ್ಟಿ ನೀಡಲಾಗುತ್ತಿದೆ. ಕಳೆದ ವರ್ಷ 5 ಸಾವಿರಕ್ಕೂ ಹೆಚ್ಚು ರೊಟ್ಟಿಗಳನ್ನು ದಾಸೋಹಕ್ಕೆ ನೀಡಲಾಗಿತ್ತು. ಈ ವರ್ಷ ಸುಮಾರು 10 ಸಾವಿರಕ್ಕೂ ಹೆಚ್ಚು ರೊಟ್ಟಿಗಳು ಗ್ರಾಮದ ಎಲ್ಲಾ ಮಹಿಳೆಯರು ದಾಸೋಹಕ್ಕೆ ನೀಡುತ್ತಿದ್ದಾರೆ’ ಎಂದರು.</p>.<p>ಗ್ರಾಮದ ಪ್ರಮುಖ ವೆಂಕಟರಾಯಗೌಡ ಮಲಘಾಣ, ಶರಣಪ್ಪಗೌಡ ಬಿರಾದಾರ, ಮಲ್ಲಿಕಾರ್ಜುನ ಪೊಲೀಸ್ಪಾಟೀಲ, ನಾಗರಾಜ ಲಕ್ಕನೊರ, ಸಂತೋಷ ಸಜ್ಜನ, ಮಲ್ಲಿಕಾರ್ಜುನ ಹೆರುಂಡಿ, ಚಂದ್ರಪ್ಪ ದೇಸಾಯಿ, ಸಾಯಬಣ್ಣ ಮೆದರಗೋಳ, ಹುಲಗಪ್ಪ ಹೊಸಳ್ಳಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ</strong>: ‘ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಸೇವೆ ಸಲ್ಲಿಸಲು ಐಕೂರು ಗ್ರಾಮದ 30 ಯುವಕರು ತೆರಳಿರುವುದು ಸಂತಸದ ಸಂಗತಿ’ ಎಂದು ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಶರಣಗೌಡ ಐಕೂರು ಹೇಳಿದರು.</p>.<p>ಕೊಪ್ಪಳದ ಗವಿಸಿದ್ದೇಶರ ಜಾತ್ರೆಯಲ್ಲಿ ಪಾಲ್ಗೊಳ್ಳುವ ಜನರ ಅನುಕೂಲಕ್ಕಾಗಿ ದಾಸೋಹಕ್ಕೆ ರೊಟ್ಟಿ ಹಾಗೂ ಜಾತ್ರೆಯಲ್ಲಿ ಸೇವೆ ಸಲ್ಲಿಸಲು ಹೊರಟ ಯುವಕರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಐಕೂರ ಗ್ರಾಮದಿಂದ ಕಳೆದ ಎರಡು ವರ್ಷಗಳಿಂದ ರೊಟ್ಟಿ ನೀಡಲಾಗುತ್ತಿದೆ. ಕಳೆದ ವರ್ಷ 5 ಸಾವಿರಕ್ಕೂ ಹೆಚ್ಚು ರೊಟ್ಟಿಗಳನ್ನು ದಾಸೋಹಕ್ಕೆ ನೀಡಲಾಗಿತ್ತು. ಈ ವರ್ಷ ಸುಮಾರು 10 ಸಾವಿರಕ್ಕೂ ಹೆಚ್ಚು ರೊಟ್ಟಿಗಳು ಗ್ರಾಮದ ಎಲ್ಲಾ ಮಹಿಳೆಯರು ದಾಸೋಹಕ್ಕೆ ನೀಡುತ್ತಿದ್ದಾರೆ’ ಎಂದರು.</p>.<p>ಗ್ರಾಮದ ಪ್ರಮುಖ ವೆಂಕಟರಾಯಗೌಡ ಮಲಘಾಣ, ಶರಣಪ್ಪಗೌಡ ಬಿರಾದಾರ, ಮಲ್ಲಿಕಾರ್ಜುನ ಪೊಲೀಸ್ಪಾಟೀಲ, ನಾಗರಾಜ ಲಕ್ಕನೊರ, ಸಂತೋಷ ಸಜ್ಜನ, ಮಲ್ಲಿಕಾರ್ಜುನ ಹೆರುಂಡಿ, ಚಂದ್ರಪ್ಪ ದೇಸಾಯಿ, ಸಾಯಬಣ್ಣ ಮೆದರಗೋಳ, ಹುಲಗಪ್ಪ ಹೊಸಳ್ಳಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>