<p><strong>ಯರಗೋಳ:</strong> ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ವಿತರಣೆಯಾಗದ ಕಾರಣ ವಿದ್ಯಾರ್ಥಿಗಳಿಗೆ ಜೆರಾಕ್ಸ್ ಪ್ರತಿಗಳನ್ನು ನೀಡಿ ಬೋಧನೆ ಮಾಡುತ್ತಿರುವ ಚಿತ್ರ ಮತ್ತು ವಿಡಿಯೊ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.</p>.<p>5ನೇ ತರಗತಿ ವಿದ್ಯಾರ್ಥಿಗಳು ಕೈಯಲ್ಲಿ ಜೆರಾಕ್ಸ್ ಪ್ರತಿಗಳನ್ನು ಹಿಡಿದು ಕಲಿಯುತ್ತಿದ್ದಾರೆ. ಈ ಕುರಿತು ವಿದ್ಯಾರ್ಥಿಗಳಲ್ಲಿ ವಿಚಾರಿಸಿದಾಗ ನಮಗೆ ಕನ್ನಡ ಪುಸ್ತಕ ಮಾತ್ರ ವಿತರಿಸಿದ್ದಾರೆ' ಎಂದು ಹೇಳಿದ್ದಾರೆ. ಶಾಲೆ ಪ್ರಾರಂಭವಾಗಿ 3 ತಿಂಗಳಾದರೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಯಾಗದಿರುವುದು ನೋವಿನ ಸಂಗತಿಯಾಗಿದೆ' ಎಂದು ಗ್ರಾಮದ ಯುವಕ ಸಾಬಣ್ಣ ಬಾನರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಶೈಕ್ಷಣಿಕ ವರ್ಷ ಆರಂಭವಾಗಿ 4 ತಿಂಗಳಾದರೂ ಪಠ್ಯಪುಸ್ತಕ ವಿತರಣೆಯಾಗದಿರುವುದು ನಾಚಿಕೆಗೇಡಿನ ವಿಷಯ. ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆಯುವುದಾದರೆ ಹೇಗೆ? ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ನಾಗರಾಜ್ ಗಮಗ ಪ್ರಶ್ನಿಸಿದರು.</p>.<p>ಈ ಕುರಿತು 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ್ ಪೂಜಾರಿ, ಬಹುತೇಕ ಶಾಲೆಗಳಿಗೆ‘ಪುಸ್ತಕಗಳನ್ನು ವಿತರಿಸಲಾಗಿದ್ದು, ಯಾವ ಶಾಲೆಗಳಿಗೆ ವಿತರಣೆ ಆಗಿಲ್ಲ ಎಂಬುದರ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯರಗೋಳ:</strong> ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ವಿತರಣೆಯಾಗದ ಕಾರಣ ವಿದ್ಯಾರ್ಥಿಗಳಿಗೆ ಜೆರಾಕ್ಸ್ ಪ್ರತಿಗಳನ್ನು ನೀಡಿ ಬೋಧನೆ ಮಾಡುತ್ತಿರುವ ಚಿತ್ರ ಮತ್ತು ವಿಡಿಯೊ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.</p>.<p>5ನೇ ತರಗತಿ ವಿದ್ಯಾರ್ಥಿಗಳು ಕೈಯಲ್ಲಿ ಜೆರಾಕ್ಸ್ ಪ್ರತಿಗಳನ್ನು ಹಿಡಿದು ಕಲಿಯುತ್ತಿದ್ದಾರೆ. ಈ ಕುರಿತು ವಿದ್ಯಾರ್ಥಿಗಳಲ್ಲಿ ವಿಚಾರಿಸಿದಾಗ ನಮಗೆ ಕನ್ನಡ ಪುಸ್ತಕ ಮಾತ್ರ ವಿತರಿಸಿದ್ದಾರೆ' ಎಂದು ಹೇಳಿದ್ದಾರೆ. ಶಾಲೆ ಪ್ರಾರಂಭವಾಗಿ 3 ತಿಂಗಳಾದರೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಯಾಗದಿರುವುದು ನೋವಿನ ಸಂಗತಿಯಾಗಿದೆ' ಎಂದು ಗ್ರಾಮದ ಯುವಕ ಸಾಬಣ್ಣ ಬಾನರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಶೈಕ್ಷಣಿಕ ವರ್ಷ ಆರಂಭವಾಗಿ 4 ತಿಂಗಳಾದರೂ ಪಠ್ಯಪುಸ್ತಕ ವಿತರಣೆಯಾಗದಿರುವುದು ನಾಚಿಕೆಗೇಡಿನ ವಿಷಯ. ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆಯುವುದಾದರೆ ಹೇಗೆ? ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ನಾಗರಾಜ್ ಗಮಗ ಪ್ರಶ್ನಿಸಿದರು.</p>.<p>ಈ ಕುರಿತು 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ್ ಪೂಜಾರಿ, ಬಹುತೇಕ ಶಾಲೆಗಳಿಗೆ‘ಪುಸ್ತಕಗಳನ್ನು ವಿತರಿಸಲಾಗಿದ್ದು, ಯಾವ ಶಾಲೆಗಳಿಗೆ ವಿತರಣೆ ಆಗಿಲ್ಲ ಎಂಬುದರ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>