ಈ ಬಗ್ಗೆ ಸಮಾಜದ ಧುರೀಣರಾದ, ಶಾಸಕಿ ಪೂರ್ಣಿಮಾ ಶ್ರೀನಿವಾಸ, ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ ಮತ್ತು ರಾಜ್ಯದ ಸಮಾಜದ ಪ್ರಮುಖರು, ‘ಗೊಲ್ಲ ಮತ್ತು ಅದಕ್ಕೆ ಸಮಾನಾಂತರವಾದ 28 ಜಾತಿಗಳಿದ್ದು ಎಲ್ಲವೂ ಗೊಲ್ಲ ಜಾತಿಯಲ್ಲೇ ಇರುತ್ತವೆ. ಹೀಗಾಗಿ ಕಾಡುಗೊಲ್ಲ ಅಭಿವೃದ್ಧಿ ನಿಗಮವನ್ನು ಪ್ರತ್ಯೇಕವಾಗಿ ಸ್ಥಾಪನೆ ಮಾಡುವುದರಿಂದ ಜನಾಂಗವನ್ನು ವಿಂಗಡನೆ ಮಾಡಿದಂತಾಗುತ್ತದೆ. ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಿದಲ್ಲಿ ಅನುಕೂಲವಾಗುತ್ತದೆ’ ಎಂದು ಮುಖ್ಯಮಂತ್ರಿಗಳಿಗೆಮನವರಿಕೆ ಮಾಡಿಕೊಟ್ಟರು. ನಂತರ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಹಿಂದೆ ಆಯ–ವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ಗೊಲ್ಲ ಅಭಿವೃದ್ದಿ ನಿಗಮ ಸ್ಥಾಪನೆಗೆ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಟಿಪ್ಪಣಿ ಹೊರಡಿಸಿದರು.