ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಶರಣಪ್ಪ ಪಾಟೀಲ ಮಾತನಾಡಿ, ಆರ್.ವಿಶ್ವನಾಥರೆಡ್ಡಿ ಅಬ್ಬೆತುಮಕೂರು ಅವರು ವಿಕಲಚೇತನರಾಗಿದ್ದರೂ ದೇಶದ ಸಂಕಷ್ಟ ಪರಿಸ್ಥಿತಿಯಲ್ಲಿ ದಾನ ಮಾಡಬೇಕೆಂಬ ಮಹದಾಸೆಯಿಂದ ಬಡಜನರಿಗೆ ದವಸ ಧಾನ್ಯ ದಾನ ಮಾಡುತ್ತಿರುವುದು ಮಾದರಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ವೀರಶೈವ ಸಮಾಜ ನಗರಾಧ್ಯಕ್ಷ ಅಯ್ಯಣ್ಣ ಹುಂಡೇಕಾರ್, ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಅಧ್ಯಕ್ಷ ಆರ್. ಮಹಾದೇವಪ್ಪ ಅಬ್ಬೆತುಮಕೂರು, ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೇರಿ, ಚನ್ನಪ್ಪ ಸಾಹು ಠಾಣಗುಂದಿ, ಸಿದ್ಲಿಂಗಪ್ಪ ಹಿರೇಗೌಡ, ಶಂಕರ ಶಾಸ್ತ್ರಿ, ಡಾ.ವಿನಾಯಕ ಪಾಟೀಲ, ಪ್ರಶಾಂತ ದೇಸಾಯಿ, ಕಾಶೀಮ್ ಅಬ್ಬೆತುಮಕೂರು ಇದ್ದರು.