<p><strong>ಗುರುಮಠಕಲ್: </strong>ತಾಲ್ಲೂಕಿನ ನಜರಾಪುರ ಗ್ರಾಮದ ಹೊರವಲಯದ ದಬ್ ದಬಿ ಜಲಪಾತ ವೀಕ್ಷಣೆಗೆ ಶನಿವಾರ ತೆರಳಿದ್ದ ಐವರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ.</p>.<p>ಹೈದರಾಬಾದ್ ಮೂಲದ ಅಬ್ದುಲ್ ರಹೀಂ (22) ಹಾಗೂ ಅದ್ನಾನ್ (16) ಮೃತಪಟ್ಟಿದ್ದು, ಇಬ್ರಾಹಿಂ ಸ್ಥಿತಿ ಗಂಭೀರವಾಗಿದೆ.</p>.<p>ಪಟ್ಟಣದಲ್ಲಿನ ಸಂಬಂಧಿಕರ ಮದುವೆಗೆ ಬಂದಿದ್ದ ಹೈದರಾಬಾದ್ ಮೂಲದ ಅಬೀಬ್ ಅಲಿ, ಅಬೀಬ್ ಅಬ್ದುಲ್ ಖಾದರ್, ಅಬ್ದುಲ್ ರಹೀಮ್, ಅದ್ನಾನ್ ಮತ್ತು ಇಬ್ರಾಹಿಂ ಅವರು ಮದುವೆಯ ನಂತರ ಜಲಪಾತ ವೀಕ್ಷಣೆಗೆ ಹೋಗಿದ್ದರು.</p>.<p>ಅದ್ನಾನ್ ಜಲಪಾತದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ರಕ್ಷಿಸಲು ತೆರಳಿದ ಅಬ್ದುಲ್ ರಹೀಂ ಹಾಗೂ ಇಬ್ರಾಹಿಂ ಪೈಕಿ ಅಬ್ದುಲ್ ರಹೀಂ ಕೂಡ ಮೃತಪಟ್ಟಿದ್ದಾರೆ. ಇಬ್ರಾಹಿಂ ಅವರನ್ನು ಸ್ಥಳದಲ್ಲಿದ್ದವರು ರಕ್ಷಿಸಿದ್ದು, ಚಿಕಿತ್ಸೆಗಾಗಿ ಹೈದರಾಬಾದ್ ನಗರಕ್ಕೆ ಕಳುಹಿಸಲಾಗಿದೆ.</p>.<p>ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಕಳೆದ ತಿಂಗಳು ರಾಜಸ್ಥಾನ ಮೂಲದ ಯುವಕ ಇದೇ ಜಲಪಾತದಲ್ಲಿ ಮೃತಪಟ್ಟ ಘಟನೆ ನಡೆದಿತ್ತು. ಜಲಪಾತದ ಬಳಿ ಪದೇ ಪದೇ ಇಂತಹ ಅಹಿತಕರ ಘಟನೆಗಳು ನಡೆಯುತ್ತಿವೆ. ಇವುಗಳನ್ನು ತಡೆಯಲು ‘ಈಗಲಾದರೂ ಜಲಪಾತದ ಹತ್ತಿರ ಸೂಚನಾ ಫಲಕ ಅಳವಡಿಸಿ, ತಡೆಗೋಡೆ ನಿರ್ಮಿಸಬೇಕು’ ಎಂದು ಗ್ರಾಮಸ್ಥರು<br />ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುರುಮಠಕಲ್: </strong>ತಾಲ್ಲೂಕಿನ ನಜರಾಪುರ ಗ್ರಾಮದ ಹೊರವಲಯದ ದಬ್ ದಬಿ ಜಲಪಾತ ವೀಕ್ಷಣೆಗೆ ಶನಿವಾರ ತೆರಳಿದ್ದ ಐವರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ.</p>.<p>ಹೈದರಾಬಾದ್ ಮೂಲದ ಅಬ್ದುಲ್ ರಹೀಂ (22) ಹಾಗೂ ಅದ್ನಾನ್ (16) ಮೃತಪಟ್ಟಿದ್ದು, ಇಬ್ರಾಹಿಂ ಸ್ಥಿತಿ ಗಂಭೀರವಾಗಿದೆ.</p>.<p>ಪಟ್ಟಣದಲ್ಲಿನ ಸಂಬಂಧಿಕರ ಮದುವೆಗೆ ಬಂದಿದ್ದ ಹೈದರಾಬಾದ್ ಮೂಲದ ಅಬೀಬ್ ಅಲಿ, ಅಬೀಬ್ ಅಬ್ದುಲ್ ಖಾದರ್, ಅಬ್ದುಲ್ ರಹೀಮ್, ಅದ್ನಾನ್ ಮತ್ತು ಇಬ್ರಾಹಿಂ ಅವರು ಮದುವೆಯ ನಂತರ ಜಲಪಾತ ವೀಕ್ಷಣೆಗೆ ಹೋಗಿದ್ದರು.</p>.<p>ಅದ್ನಾನ್ ಜಲಪಾತದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ರಕ್ಷಿಸಲು ತೆರಳಿದ ಅಬ್ದುಲ್ ರಹೀಂ ಹಾಗೂ ಇಬ್ರಾಹಿಂ ಪೈಕಿ ಅಬ್ದುಲ್ ರಹೀಂ ಕೂಡ ಮೃತಪಟ್ಟಿದ್ದಾರೆ. ಇಬ್ರಾಹಿಂ ಅವರನ್ನು ಸ್ಥಳದಲ್ಲಿದ್ದವರು ರಕ್ಷಿಸಿದ್ದು, ಚಿಕಿತ್ಸೆಗಾಗಿ ಹೈದರಾಬಾದ್ ನಗರಕ್ಕೆ ಕಳುಹಿಸಲಾಗಿದೆ.</p>.<p>ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಕಳೆದ ತಿಂಗಳು ರಾಜಸ್ಥಾನ ಮೂಲದ ಯುವಕ ಇದೇ ಜಲಪಾತದಲ್ಲಿ ಮೃತಪಟ್ಟ ಘಟನೆ ನಡೆದಿತ್ತು. ಜಲಪಾತದ ಬಳಿ ಪದೇ ಪದೇ ಇಂತಹ ಅಹಿತಕರ ಘಟನೆಗಳು ನಡೆಯುತ್ತಿವೆ. ಇವುಗಳನ್ನು ತಡೆಯಲು ‘ಈಗಲಾದರೂ ಜಲಪಾತದ ಹತ್ತಿರ ಸೂಚನಾ ಫಲಕ ಅಳವಡಿಸಿ, ತಡೆಗೋಡೆ ನಿರ್ಮಿಸಬೇಕು’ ಎಂದು ಗ್ರಾಮಸ್ಥರು<br />ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>