ಈ ಕಟ್ಟಡದ ಕಾಮಗಾರಿಯನ್ನು ನಿರ್ಮಿತಿ ಕೇಂದ್ರ ಕೈಗೆತ್ತಿಕೊಂಡಿದೆ. ಮೊದಲ ಹಂತದಲ್ಲಿ ₹ 1.97 ಲಕ್ಷ ಬಿಡುಗಡೆಯಾಗಿದ್ದು, ಇದು ಜಿಲ್ಲೆಯ ಬಹು ದೊಡ್ಡ ಯೋಜನೆಯಾಗಿದೆ. ವೃದ್ಧರು, ಅನಾಥರು, ಆಶಕ್ತರು ಹಾಗೂ ಭಿಕ್ಷುಕರಿಗೆ ವಸತಿ ಹಾಗೂ ಊಟದ ವ್ಯವಸ್ಥೆಯೊಂದಿಗೆ ಆಶ್ರಯ ನೀಡುವ ಉದ್ದೇಶದಿಂದ ಕಟ್ಟಡ ನಿರ್ಮಿಸಲಾಗುತ್ತದೆ. ಈಗಾಗಲೇ ದೋರನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ₹ 5 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ನೀಡಲಾಗಿದ್ದು, ಪಶುಪಾಲನೆ ಆಸ್ಪತ್ರೆ ಉದ್ಫಾಟಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಹೆಚ್ಚು ಅನುದಾನ ತಂದು ತಮ್ಮ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ವಿವಿಧ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ತಿಳಿಸಿದರು.