ರಥ ಮುಂದೆ ಸಾಗುತ್ತಿದ್ದ ಸಂದರ್ಭದಲ್ಲಿ ರಥ ಏರಿದ ತಹಶೀಲ್ದಾರ್ ಉಮಾಕಾಂತ ಹಳ್ಳೆ ಹಾಗೂ ಪೊಲೀಸ್ ಅಧಿಕಾರಿಗಳು ಸಿಮೀತ ದೂರದವರೆಗೆ ರಥ ಎಳೆದು ನಂತರ ನಿಲ್ಲಿಸುವಂತೆ ಪೀಠಾಧಿಪತಿ ಡಾ. ಸಿದ್ದತೋಟೇಂದ್ರ ಅವರಲ್ಲಿ ಮನವಿ ಮಾಡಿಕೊಂಡರು. ಆದರೆ ನೋಡನೋಡುತ್ತಲೇ ಭಕ್ತರು ಪ್ರತಿವರ್ಷದಂತೆ ಬಸವಣ್ಣನ ಗುಡಿವರೆಗೆ ರಥ ಎಳೆದರು.