ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಅಂಗಡಿ ಮಾಲೀಕನ ಮನೆಯಲ್ಲೇ ಯುವಕನ ಕೊಲೆ, ಬೆಚ್ಚಿದ ಜನ

Last Updated 14 ಜನವರಿ 2021, 3:47 IST
ಅಕ್ಷರ ಗಾತ್ರ

ಹುಣಸಗಿ: ಪಟ್ಟಣದಲ್ಲಿ ಮಧ್ಯಾಹ್ನ ಚಿನ್ನದ ಅಂಗಡಿಯ ಮಾಲೀಕನ ಪುತ್ರನನ್ನು ಅವರ ಮನೆಯಲ್ಲಿಯೇ ಕೊಲೆ ಮಾಡಿದ ಘಟನೆ ಬುಧವಾರ ನಡೆದಿದೆ.

ಕೊಲೆಯಾದ ಯುವಕನನ್ನು ನರೇಂದ್ರ ಶಿರೂರಿ(22) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಮನೆಗೆ ಊಟಕ್ಕೆ ಬಂದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಪಟ್ಟಣ ಸೇರಿದಂತೆ ತಾಲ್ಲೂಕಿನೆಲ್ಲೆಡೆ ಜನ ಭಯಭೀತರಾಗಿದ್ದು, ಜನ ತಂಡೋಪತಂಡವಾಗಿ ಕೊಲೆಯಾದ ಸ್ಥಳದತ್ತ ಆಗಮಿಸುತ್ತಿದ್ದರು.

‘ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕಿಶೋರ ಕಣ್ಮರೆಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಮೃತ ಯುವಕನ ತಂದೆ ಜಗದೀಶ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಯಾದಗಿರಿ ಎಸ್.ಪಿ ಋಷಿಕೇಶ ಭಗವಾನ್ ಸೋನವಣೆ, ಪ್ರೊಬೇಷನರಿ ಐಪಿಎಸ್ ಅಧಿಕಾರಿ ಶಿವಾಂಶು ರಜಪೂತ್, ಡಿವೈಎಸ್ಪಿ ವೆಂಕಟೇಶ ಉಗಿಬಂಡಿ, ಹುಣಸಗಿ ಸಿಪಿಐ ದೌಲತ್ ಎನ್.ಕೆ, ಪಿಎಸ್ಐ ಬಾಪುಗೌಡ ಪಾಟೀಲ, ಬಾಶುಮೀಯಾ ಕೊಂಚೂರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಪೊಲೀಸ್ ಶ್ವಾನದಳ ಆಗಮಿಸಿದ್ದರು.

ಆರೋಪಿ ಪತ್ತೆಗಾಗಿ ಪ್ರತ್ಯೇಕ 4 ತಂಡಗಳನ್ನು ರಚಿಸಿ ವ್ಯಾಪಕ ಜಾಲ ಬೀಸಲಾಗಿದೆ ಎಂದು ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT