<p><strong>ಸುರಪುರ (ಯಾದಗಿರಿ ಜಿಲ್ಲೆ):</strong> ದೇವದಾಸಿ ಆಗುವಂತೆ ಕುಟುಂಬ ಸದಸ್ಯರು ಹಾಕಿದ ಒತ್ತಡವನ್ನು ಧಿಕ್ಕರಿಸಿ ಮನೆಯಿಂದ ತಪ್ಪಿಸಿಕೊಂಡ ಯುವತಿಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿ, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆಶ್ರಯ ನೀಡಿದ್ದಾರೆ.</p>.<p>ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಗ್ರಾಮವೊಂದರ ಯುವತಿ ಪ್ರೌಢಶಾಲೆಯವರೆಗೆ ಶಿಕ್ಷಣ ಪಡೆದಿದ್ದಾರೆ. ತಾಯಿ ದೇವದಾಸಿಯಾಗಿದ್ದು, ಹಿರಿಯ ಸಹೋದರಿಗೆ ಮದುವೆಯಾಗಿದೆ.</p>.<p>‘ಅಕ್ಕನ ಗಂಡನನ್ನೇ ಮದುವೆಯಾಗುವಂತೆ ಸಂಬಂಧಿಕರು ಒತ್ತಾಯಿಸಿದಾಗ ಯುವತಿ ನಿರಾಕರಿಸಿದ್ದಾರೆ. ಮುತ್ತು ಕಟ್ಟಿಕೊಳ್ಳಲು (ದೇವದಾಸಿ ಪದ್ಧತಿ) ಒಪ್ಪದಿದ್ದಾಗ, ಕಿರುಕುಳ ನೀಡಲಾಗಿದೆ. ಇದರಿಂದ ಹೆದರಿದ ಯುವತಿ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಸಂಬಂಧಿಕರೊಬ್ಬರನ್ನು ಸಂಪರ್ಕಿಸಿದಾಗ, ನೆರವು ಸಿಕ್ಕಿದೆ’ ಎಂದು ಮೂಲಗಳು ತಿಳಿಸಿವೆ.</p>.<p>***<br />ಶೋಷಿತರು ಶಿಕ್ಷಣ ಪಡೆಯಬೇಕು. ಸಂಘಟನೆಯವರು ಈ ದೇವದಾಸಿ ಪದ್ಧತಿಯನ್ನು ಇಲ್ಲವಾಗಿಸಬೇಕು. ಅಧಿಕಾರಿಗಳು ಹೆಚ್ಚು ಮುತುವರ್ಜಿ ವಹಿಸಬೇಕು.<br /><em><strong>-ರೇಣುಕಾ, ನೊಂದ ಯುವತಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ (ಯಾದಗಿರಿ ಜಿಲ್ಲೆ):</strong> ದೇವದಾಸಿ ಆಗುವಂತೆ ಕುಟುಂಬ ಸದಸ್ಯರು ಹಾಕಿದ ಒತ್ತಡವನ್ನು ಧಿಕ್ಕರಿಸಿ ಮನೆಯಿಂದ ತಪ್ಪಿಸಿಕೊಂಡ ಯುವತಿಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿ, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆಶ್ರಯ ನೀಡಿದ್ದಾರೆ.</p>.<p>ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಗ್ರಾಮವೊಂದರ ಯುವತಿ ಪ್ರೌಢಶಾಲೆಯವರೆಗೆ ಶಿಕ್ಷಣ ಪಡೆದಿದ್ದಾರೆ. ತಾಯಿ ದೇವದಾಸಿಯಾಗಿದ್ದು, ಹಿರಿಯ ಸಹೋದರಿಗೆ ಮದುವೆಯಾಗಿದೆ.</p>.<p>‘ಅಕ್ಕನ ಗಂಡನನ್ನೇ ಮದುವೆಯಾಗುವಂತೆ ಸಂಬಂಧಿಕರು ಒತ್ತಾಯಿಸಿದಾಗ ಯುವತಿ ನಿರಾಕರಿಸಿದ್ದಾರೆ. ಮುತ್ತು ಕಟ್ಟಿಕೊಳ್ಳಲು (ದೇವದಾಸಿ ಪದ್ಧತಿ) ಒಪ್ಪದಿದ್ದಾಗ, ಕಿರುಕುಳ ನೀಡಲಾಗಿದೆ. ಇದರಿಂದ ಹೆದರಿದ ಯುವತಿ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಸಂಬಂಧಿಕರೊಬ್ಬರನ್ನು ಸಂಪರ್ಕಿಸಿದಾಗ, ನೆರವು ಸಿಕ್ಕಿದೆ’ ಎಂದು ಮೂಲಗಳು ತಿಳಿಸಿವೆ.</p>.<p>***<br />ಶೋಷಿತರು ಶಿಕ್ಷಣ ಪಡೆಯಬೇಕು. ಸಂಘಟನೆಯವರು ಈ ದೇವದಾಸಿ ಪದ್ಧತಿಯನ್ನು ಇಲ್ಲವಾಗಿಸಬೇಕು. ಅಧಿಕಾರಿಗಳು ಹೆಚ್ಚು ಮುತುವರ್ಜಿ ವಹಿಸಬೇಕು.<br /><em><strong>-ರೇಣುಕಾ, ನೊಂದ ಯುವತಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>