<p><strong>ಯಾದಗಿರಿ</strong>: ಕೊರೊನಾ ಸೋಂಕಿನ ಭಯದಿಂದ ಬೇರೆ ಗ್ರಾಮಸ್ಥರು ತಮ್ಮ ಊರಿಗೆ ಪ್ರವೇಶ ಮಾಡಬಾರದು ಎಂದು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಮುಳ್ಳು ಬೇಲಿ ಹಾಕಿ ದಿಗ್ಬಂಧನ ಹಾಕಿಕೊಂಡಿದ್ದಾರೆ.</p>.<p>ಗುರುಮಠಕಲ್ ತಾಲ್ಲೂಕಿನ ಮಿನಾಸಪುರ ಗ್ರಾಮಕ್ಕೆ ಹೊರಗಿನವರು ಬಾರದಂತೆ ರಸ್ತೆಗೆ ಕಲ್ಲು ಹಾಕಿ ರಸ್ತೆ ಮುಚ್ಚಿದ್ದಾರೆ. ಹುಣಸಗಿ ತಾಲ್ಲೂಕಿನ ಗೆದ್ದಲಮರಿ ಗ್ರಾಮದಲ್ಲಿ ಬೇರೆ ಗ್ರಾಮಸ್ಥರು ಪ್ರವೇಶಿಸದಂತೆ ಗೆದ್ದಲಮರಿ ಮುಖ್ಯ ರಸ್ತೆಗೆ ಮುಳ್ಳು ಬೇಲಿ ಹಾಕಿದ್ದಾರೆ. ಜೆಸಿಬಿ ಮೂಲಕ ಮುಳ್ಳುಕಂಟಿ ಕಡಿದು ರಸ್ತೆಗೆ ಅಡ್ಡಹಾಕಿದ್ದಾರೆ.</p>.<p class="Subhead"><strong>ರಸ್ತೆ ತೋಡಿದ ಗ್ರಾಮಸ್ಥರು</strong></p>.<p class="Subhead">ಜಿಲ್ಲೆಯ ಯರಗೋಳ ಗ್ರಾಮದ ಜನತೆಯಲ್ಲಿ ಕೊರೊನಾ ಆತಂಕ ಹೆಚ್ಚಾಗಿದ್ದು. ಬೇರೆ ಗ್ರಾಮದ ಜನರ ಪ್ರವೇಶ ತಡೆಯಲು ಗ್ರಾಮದ ಹೊರವಲಯದಲ್ಲಿರುವ ಯಾಗಾಪುರ ರಸ್ತೆಯನ್ನು ತುಂಡರಿಸಿದ್ದಾರೆ.</p>.<p>ಯರಗೋಳದಿಂದ ಯಾಗಾಪುರ 8 ಕಿಮೀ ಅಂತರದಲ್ಲಿದೆ. ಹೀಗಾಗಿ ಯಾಗಾಪುರಕ್ಕೆ ತೆರಳುವ ಮಾರ್ಗದಲ್ಲಿ ರಸ್ತೆ ಅಗೆದು ಅಲ್ಲಿಯವರೂ ಇಲ್ಲಿಗೆ ಪ್ರವೇಶಿಸದಂತೆ ಮಾಡಿದ್ದಾರೆ.</p>.<p>ವಡಗೇರಾ ತಾಲ್ಲೂಕಿನ ಬಿಳ್ಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂದಿನಾಳ ಗ್ರಾಮದಲ್ಲಿ ಮರದ ದಿಮ್ಮೆಯನ್ನು ರಸ್ತೆಗೆ ಅಡ್ಡಲಾಗಿ ಗ್ರಾಮಸ್ಥರು ಹಾಕಿದ್ದಾರೆ. ಈ ಮೂಲಕ ಗ್ರಾಮಕ್ಕೆ ಪ್ರವೇಶ ಮಾಡದಂತೆ ದಿಗ್ಬಂಧನ ಹಾಕಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಕೊರೊನಾ ಸೋಂಕಿನ ಭಯದಿಂದ ಬೇರೆ ಗ್ರಾಮಸ್ಥರು ತಮ್ಮ ಊರಿಗೆ ಪ್ರವೇಶ ಮಾಡಬಾರದು ಎಂದು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಮುಳ್ಳು ಬೇಲಿ ಹಾಕಿ ದಿಗ್ಬಂಧನ ಹಾಕಿಕೊಂಡಿದ್ದಾರೆ.</p>.<p>ಗುರುಮಠಕಲ್ ತಾಲ್ಲೂಕಿನ ಮಿನಾಸಪುರ ಗ್ರಾಮಕ್ಕೆ ಹೊರಗಿನವರು ಬಾರದಂತೆ ರಸ್ತೆಗೆ ಕಲ್ಲು ಹಾಕಿ ರಸ್ತೆ ಮುಚ್ಚಿದ್ದಾರೆ. ಹುಣಸಗಿ ತಾಲ್ಲೂಕಿನ ಗೆದ್ದಲಮರಿ ಗ್ರಾಮದಲ್ಲಿ ಬೇರೆ ಗ್ರಾಮಸ್ಥರು ಪ್ರವೇಶಿಸದಂತೆ ಗೆದ್ದಲಮರಿ ಮುಖ್ಯ ರಸ್ತೆಗೆ ಮುಳ್ಳು ಬೇಲಿ ಹಾಕಿದ್ದಾರೆ. ಜೆಸಿಬಿ ಮೂಲಕ ಮುಳ್ಳುಕಂಟಿ ಕಡಿದು ರಸ್ತೆಗೆ ಅಡ್ಡಹಾಕಿದ್ದಾರೆ.</p>.<p class="Subhead"><strong>ರಸ್ತೆ ತೋಡಿದ ಗ್ರಾಮಸ್ಥರು</strong></p>.<p class="Subhead">ಜಿಲ್ಲೆಯ ಯರಗೋಳ ಗ್ರಾಮದ ಜನತೆಯಲ್ಲಿ ಕೊರೊನಾ ಆತಂಕ ಹೆಚ್ಚಾಗಿದ್ದು. ಬೇರೆ ಗ್ರಾಮದ ಜನರ ಪ್ರವೇಶ ತಡೆಯಲು ಗ್ರಾಮದ ಹೊರವಲಯದಲ್ಲಿರುವ ಯಾಗಾಪುರ ರಸ್ತೆಯನ್ನು ತುಂಡರಿಸಿದ್ದಾರೆ.</p>.<p>ಯರಗೋಳದಿಂದ ಯಾಗಾಪುರ 8 ಕಿಮೀ ಅಂತರದಲ್ಲಿದೆ. ಹೀಗಾಗಿ ಯಾಗಾಪುರಕ್ಕೆ ತೆರಳುವ ಮಾರ್ಗದಲ್ಲಿ ರಸ್ತೆ ಅಗೆದು ಅಲ್ಲಿಯವರೂ ಇಲ್ಲಿಗೆ ಪ್ರವೇಶಿಸದಂತೆ ಮಾಡಿದ್ದಾರೆ.</p>.<p>ವಡಗೇರಾ ತಾಲ್ಲೂಕಿನ ಬಿಳ್ಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂದಿನಾಳ ಗ್ರಾಮದಲ್ಲಿ ಮರದ ದಿಮ್ಮೆಯನ್ನು ರಸ್ತೆಗೆ ಅಡ್ಡಲಾಗಿ ಗ್ರಾಮಸ್ಥರು ಹಾಕಿದ್ದಾರೆ. ಈ ಮೂಲಕ ಗ್ರಾಮಕ್ಕೆ ಪ್ರವೇಶ ಮಾಡದಂತೆ ದಿಗ್ಬಂಧನ ಹಾಕಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>