ಯಾದಗಿರಿ: ಜಿಲ್ಲೆಯ ವಿವಿಧೆಡೆ ಬ್ಯಾಂಕ್ನಿಂದ ಹಣ ಡ್ರಾ ಮಾಡಿಕೊಂಡು ಬರುತ್ತಿದ್ದ ಸಾರ್ವಜನಿಕರ ಗಮನ ಬೇರೆ ಕಡೆ ಸೆಳೆದು ಹಣ ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಆಂಧ್ರಪ್ರದೇಶದ ಮೂಲದ ಬಾಣಾಲ ಸುಭಾಷ್, ಅವುಲ ಆಮೋಸ್, ಅವುಲ ವಿಜ್ಜೊನ್ ಗೋಗುಲ್ ರಾಜೇಶ ಆರೋಪಿಗಳನ್ನು ಬಂಧನ ಮಾಡಲಾಗಿದೆ.
2017 ರಿಂದ ಇಲ್ಲಿವರಗೆ ಸುರಪುರ, ಶಹಾಪುರ,ಯಾದಗಿರಿ ಯಲ್ಲಿ 10 ಹಣ ಕಳ್ಳತನ ಪ್ರಕರಣ ಪತ್ತೆಯಾಗಿದೆ.
ಇನ್ನೊರ್ವ ಆರೋಪಿ ಅವುಲ ರಾಕೇಶ್ ಪರಾರಿಯಾಗಿದ್ದಾನೆ. ಶಹಾಪುರ ಠಾಣೆಯ ಪಿಐ ನಾಗರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಆರೋಪಿಗಳಿಂದ ₹2.65 ಹಣ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಎಸ್ಪಿ ಋಷಿಕೇಶ ಭಗವಾನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.