<p><strong>ಶಹಾಪುರ</strong>: ಮನೆಯ ಅಲಮಾರಿಯಲ್ಲಿ ಇಟ್ಟಿದ್ದ ₹ 50 ಸಾವಿರ ಹಾಗೂ ದ್ವಿಚಕ್ರ ವಾಹನದ ದಾಖಲೆಗಳನ್ನು ಕಳವು ಮಾಡಿದ ಆರೋಪ ಸಾಬೀತು ಆಗಿದ್ದರಿಂದ ಸೋಮವಾರ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಧೀಶೆ ಶೋಭಾ ಅವರು ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ₹ 6 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.</p>.<p>ಯಾದಗಿರಿ ನಗರದ ಸಯ್ಯದ್ ಶಮುದ್ದೀನ್ ಸಯ್ಯದ್ ಮೈನುದ್ದೀನ್ ಮಾಸುಲ್ದಾರ ಶಿಕ್ಷೆಗೆ ಒಳಗಾದ ವ್ಯಕ್ತಿ.</p>.<p><strong>ಏನಿದು ಪ್ರಕರಣ: </strong>2025 ಜನವರಿ 17ರಂದು ಶಹಾಪುರ ನಗರದ ದೇಶಮುಖ ಬಡಾವಣೆಯ ನಿವಾಸಿ ಮಹ್ಮದ ಆರಿಫ್ ಅವರು ಶುಕ್ರವಾರ ನಮಾಜ ಮಾಡಲು ಮಸೀದಿಗೆ ತೆರಳಿದ್ದರು. ನಂತರ ಮನೆಗೆ ಬಂದು ನೋಡಿದಾಗ ಮನೆಯ ಅಲಮಾರಿಯಲ್ಲಿದ್ದ ₹ 50 ಸಾವಿರ ಹಾಗೂ ವಾಹನದ ದಾಖಲೆಗಳನ್ನು ಕಳವು ಮಾಡಿಕೊಂಡ ಬಗ್ಗೆ ಶಹಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ನ್ಯಾಯಾಲಯಕ್ಕೆ ತನಿಖಾಧಿಕಾರಿ ಡಿ.ವಿ ನಾಯಕ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಕೇವಲ ಆರು ತಿಂಗಳಲ್ಲಿ ತ್ವರಿತವಾಗಿ ಪ್ರಕರಣವನ್ನು ಇತ್ಯಾರ್ಥಗೊಳಿಸಿ ಆರೋಪಿಗೆ ಶಿಕ್ಷೆ ಆಗಿದೆ ಎಂದು ಫಿರ್ಯಾಧಿದಾರ ಪರವಾಗಿ ವಾದ ಮಂಡಿಸಿದ್ದ ಎಪಿಪಿ ದಿವ್ಯಾರಾಣಿ ನಾಯಕ ಸುರಪುರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ</strong>: ಮನೆಯ ಅಲಮಾರಿಯಲ್ಲಿ ಇಟ್ಟಿದ್ದ ₹ 50 ಸಾವಿರ ಹಾಗೂ ದ್ವಿಚಕ್ರ ವಾಹನದ ದಾಖಲೆಗಳನ್ನು ಕಳವು ಮಾಡಿದ ಆರೋಪ ಸಾಬೀತು ಆಗಿದ್ದರಿಂದ ಸೋಮವಾರ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಧೀಶೆ ಶೋಭಾ ಅವರು ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ₹ 6 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.</p>.<p>ಯಾದಗಿರಿ ನಗರದ ಸಯ್ಯದ್ ಶಮುದ್ದೀನ್ ಸಯ್ಯದ್ ಮೈನುದ್ದೀನ್ ಮಾಸುಲ್ದಾರ ಶಿಕ್ಷೆಗೆ ಒಳಗಾದ ವ್ಯಕ್ತಿ.</p>.<p><strong>ಏನಿದು ಪ್ರಕರಣ: </strong>2025 ಜನವರಿ 17ರಂದು ಶಹಾಪುರ ನಗರದ ದೇಶಮುಖ ಬಡಾವಣೆಯ ನಿವಾಸಿ ಮಹ್ಮದ ಆರಿಫ್ ಅವರು ಶುಕ್ರವಾರ ನಮಾಜ ಮಾಡಲು ಮಸೀದಿಗೆ ತೆರಳಿದ್ದರು. ನಂತರ ಮನೆಗೆ ಬಂದು ನೋಡಿದಾಗ ಮನೆಯ ಅಲಮಾರಿಯಲ್ಲಿದ್ದ ₹ 50 ಸಾವಿರ ಹಾಗೂ ವಾಹನದ ದಾಖಲೆಗಳನ್ನು ಕಳವು ಮಾಡಿಕೊಂಡ ಬಗ್ಗೆ ಶಹಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ನ್ಯಾಯಾಲಯಕ್ಕೆ ತನಿಖಾಧಿಕಾರಿ ಡಿ.ವಿ ನಾಯಕ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಕೇವಲ ಆರು ತಿಂಗಳಲ್ಲಿ ತ್ವರಿತವಾಗಿ ಪ್ರಕರಣವನ್ನು ಇತ್ಯಾರ್ಥಗೊಳಿಸಿ ಆರೋಪಿಗೆ ಶಿಕ್ಷೆ ಆಗಿದೆ ಎಂದು ಫಿರ್ಯಾಧಿದಾರ ಪರವಾಗಿ ವಾದ ಮಂಡಿಸಿದ್ದ ಎಪಿಪಿ ದಿವ್ಯಾರಾಣಿ ನಾಯಕ ಸುರಪುರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>