‘ಜಿಲ್ಲಾ ಉಸ್ತುವಾರಿ ಸಚಿವರು ಗಮನ ಹರಿಸಲಿ’
ಜಿಲ್ಲಾ ಕೇಂದ್ರದ ನಗರಸಭೆಯಲ್ಲಿ ಕಳೆದ 6ತಿಂಗಳಿಂದಲೂ ಕಾಯಂ ಪೌರಾಯುಕ್ತರು ಇಲ್ಲದಿರುವುದು ಸರ್ಕಾರಕ್ಕೆ ಗೊತ್ತಿದ್ದರೂ ಮೌನವಹಿಸಿರುವುದು ಯಾಕೆ ಎನ್ನುವುದು ಜನತೆಯ ಪ್ರಶ್ನೆಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಶಹಾಪುರ ತಾಲ್ಲೂಕಿನವರಿದ್ದು ಜಿಲ್ಲಾ ಕೇಂದ್ರವಾದ ಯಾದಗಿರಿಯನ್ನು ನಿರ್ಲಕ್ಷ್ಯಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಜಿಲ್ಲೆಯ ನಾಲ್ಕು ಮತಕ್ಷೇತ್ರಗಳ ಪೈಕಿ ಗುರುಮಠಕಲ್ ಹೊರತುಪಡಿಸಿ ಉಳಿದ ಮೂರು ಮತಕ್ಷೇತ್ರಗಳಾದ ಯಾದಗಿರಿ ಶಹಾಪುರ ಸುರಪುರದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ನ ಶಾಸಕರೇ ಇದ್ದಾರೆ. ಆದರೆ ಜಿಲ್ಲಾ ಕೇಂದ್ರದಲ್ಲಿ ಸಮಪರ್ಕವಾಗಿ ಕೆಲಸಗಳಾಗಬೇಕಾದರೆ ಕಾಯಂ ಪೌರಾಯುಕ್ತರ ನೇಮಕ ಮಾಡುವುದು ಅಗತ್ಯವಿದೆ. ತುರ್ತಾಗಿ ನೇಮಕ ಮಾಡಬೇಕು ಎನ್ನುವುದು ನಗರ ನಿವಾಸಿಗಳ ಆಗ್ರಹವಾಗಿದೆ.