ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಯಾದಗಿರಿ: ಅಕ್ರಮ ಖಾತಾ ನಕಲು, ಸರ್ಕಾರಿ ಆಸ್ತಿ ಪರಭಾರೆ ಕಳಂಕ ಹೊತ್ತಿರುವ ನಗರಸಭೆ

Published : 13 ಫೆಬ್ರುವರಿ 2024, 6:27 IST
Last Updated : 13 ಫೆಬ್ರುವರಿ 2024, 6:27 IST
ಫಾಲೋ ಮಾಡಿ
Comments
ಜಿಲ್ಲಾ ಕೇಂದ್ರ ಸ್ಥಾನವಾಗಿರುವ ಯಾದಗಿರಿ ನಗರಸಭೆಗೆ ಕಾಯಂ ಪೌರಾಯುಕ್ತರು ಇಲ್ಲದಿರುವುದು ಸರ್ಕಾರಕ್ಕೆ ನಾಚಿಕಗೇಡಿನ ಸಂಗತಿಯಾಗಿದೆ. ಕೂಡಲೇ ಕಾಯಂ ಪೌರಾಯುಕ್ತರನ್ನು ನೇಮಿಸಿ ಸುಗಮ ಆಡಳಿತಕ್ಕೆ ಅನುಕೂಲ ಮಾಡಿಕೊಡಬೇಕು
ಮಾಣಿಕರೆಡ್ಡಿ ಕುರಕುಂದಿ ಯುವ ಮುಖಂಡ
ಯಾದಗಿರಿ ನಗರಸಭೆಯಲ್ಲಿ ಸಣ್ಣಪುಟ್ಟ ಕೆಲಸಕ್ಕೂ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಯಂ ಪೌರಾಯುಕ್ತರಿಲ್ಲದ ಕಾರಣ ಅನೇಕ ಕೆಲಸಗಳು ಬಾಕಿ ಉಳಿದುಕೊಂಡಿವೆ
ಶಿವರಾಜ ದಾಸನಕೇರಿ ನಗರ ನಿವಾಸಿ
‘ಜಿಲ್ಲಾ ಉಸ್ತುವಾರಿ ಸಚಿವರು ಗಮನ ಹರಿಸಲಿ’
ಜಿಲ್ಲಾ ಕೇಂದ್ರದ ನಗರಸಭೆಯಲ್ಲಿ ಕಳೆದ 6ತಿಂಗಳಿಂದಲೂ ಕಾಯಂ ಪೌರಾಯುಕ್ತರು ಇಲ್ಲದಿರುವುದು ಸರ್ಕಾರಕ್ಕೆ ಗೊತ್ತಿದ್ದರೂ ಮೌನವಹಿಸಿರುವುದು ಯಾಕೆ ಎನ್ನುವುದು ಜನತೆಯ ಪ್ರಶ್ನೆಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಶಹಾಪುರ ತಾಲ್ಲೂಕಿನವರಿದ್ದು ಜಿಲ್ಲಾ ಕೇಂದ್ರವಾದ ಯಾದಗಿರಿಯನ್ನು ನಿರ್ಲಕ್ಷ್ಯಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಜಿಲ್ಲೆಯ ನಾಲ್ಕು ಮತಕ್ಷೇತ್ರಗಳ ಪೈಕಿ ಗುರುಮಠಕಲ್ ಹೊರತುಪಡಿಸಿ ಉಳಿದ ಮೂರು ಮತಕ್ಷೇತ್ರಗಳಾದ ಯಾದಗಿರಿ ಶಹಾಪುರ ಸುರಪುರದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್‌ನ ಶಾಸಕರೇ ಇದ್ದಾರೆ. ಆದರೆ ಜಿಲ್ಲಾ ಕೇಂದ್ರದಲ್ಲಿ ಸಮಪರ್ಕವಾಗಿ ಕೆಲಸಗಳಾಗಬೇಕಾದರೆ ಕಾಯಂ ಪೌರಾಯುಕ್ತರ ನೇಮಕ ಮಾಡುವುದು ಅಗತ್ಯವಿದೆ. ತುರ್ತಾಗಿ ನೇಮಕ ಮಾಡಬೇಕು ಎನ್ನುವುದು ನಗರ ನಿವಾಸಿಗಳ ಆಗ್ರಹವಾಗಿದೆ.
ಇನ್ನೂ ಈಡೇರದ ಭರವಸೆ
ಯಾದಗಿರಿ ಮತಕ್ಷೇತ್ರದ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ನಿಯಮ-73 ರಡಿ ಪೌರಾಯುಕ್ತರ ನೇಮಕ ಕುರಿತಂತೆ ಬೆಳಗಾವಿ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ್ದರು. ಆದರೂ ಇಲ್ಲಿಯತನಕ ಕಾಯಂ ಪೌರಾಯುಕ್ತರು ಬಂದಿಲ್ಲ. ಶೀಘ್ರದಲ್ಲಿ ನಗರಸಭೆಯ ಆಯುಕ್ತರ ಹುದ್ದೆ ಭರ್ತಿ ಮಾಡುವ ಬಗ್ಗೆ ಪೌರಾಡಳಿತ ಸಚಿವರ ಗಮನ ಸೆಳೆದಿದ್ದರು. ಆದರೆ ಭರವಸೆ ಇನ್ನೂ ಈಡೇರಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT