<p><strong>ಯಾದಗಿರಿ:</strong> ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ತಾಳ್ಮೆ ಬೆಳೆಸಿಕೊಳ್ಳುವ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ತಿಳಿಸಿದರು.</p>.<p>ನಗರದ ವಾಲ್ಮೀಕಿ ಭವನದಲ್ಲಿ ಎ1 ಕೆಎಎಸ್ ಕರಿಯರ್ ಅಕಾಡೆಮಿಯ ಪ್ರಥಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮುಖಾಂತರ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.</p>.<p>ಕರ್ನಾಟಕ ಆಡಳಿತ ಸೇವೆಯಲ್ಲಿ ಕಾರ್ಯನಿರ್ವಹಿಸ ಬೇಕಾದರೆ ವಿದ್ಯಾರ್ಥಿಗಳು ತಾಳ್ಮೆಯಿಂದ, ಏಕಾಗ್ರತೆಯಿಂದ ವ್ಯಾಸಂಗ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಹಿಂದೆ ಗುರು ಇರಬೇಕು ಮುಂದೆ ಗುರಿ ಇರಬೇಕು ಎನ್ನುವ ಗಾದೆಯ ವಾಡಿಕೆಯಂತೆ ವಿದ್ಯಾರ್ಥಿಗಳು ಸಾಧಿಸುವ ಛಲ ದೊಂದಿಗೆ ಮುನ್ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಇತಿಹಾಸ ವಿಭಾಗದ ಪ್ರೊಫೆಸರ್ ಡಾ.ಸರ್ವೋದಯ ತಿಳಿಸಿದರು.</p>.<p>ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಓದುವಂತಹ ಇಚ್ಛಾಶಕ್ತಿ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಜೀವನದಲ್ಲಿ ಸಮಯಕ್ಕೆ ಗೌರವ ನೀಡಿದರೆ ಸಮಯ ಒಂದಲ್ಲ ಒಂದು ದಿನ ನಿಮಗೆ ಗೌರವ ನೀಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಸೂಚಿಸಿದರು.</p>.<p>ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ವಿವಿಧ ಕಾಲೇಜುಗಳ ಪ್ರಾಚಾರ್ಯರಾದ ಶರಣಗೌಡ , ರಾಜಪ್ಪ ಕೊನಿಮನಿ, ರಘುನಾಥ್ ರೆಡ್ಡಿ ಹಾಗೂ ಜವಹಾರ್ ಶಿಕ್ಷಣ ಸಂಸ್ಥೆಯ ಬಿಎಡ್ ಕಾಲೇಜಿನ ಪ್ರಾಚಾರ್ಯರಾದ ಇಕ್ಬಾಲ್ ಅವರಿಗೆ ಸಂಸ್ಥೆಯ ವತಿಯಿಂದ ಎ1 ಪ್ರತಿಭಾ ಪುರಸ್ಕಾರ ಸನ್ಮಾನ ಮಾಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಎ 1 ಕೆಎಎಸ್ ಕರಿಯರ್ ಅಕಾಡೆಮಿಯ ಪ್ರಥಮ ವರ್ಷದ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ತಾಳ್ಮೆ ಬೆಳೆಸಿಕೊಳ್ಳುವ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ತಿಳಿಸಿದರು.</p>.<p>ನಗರದ ವಾಲ್ಮೀಕಿ ಭವನದಲ್ಲಿ ಎ1 ಕೆಎಎಸ್ ಕರಿಯರ್ ಅಕಾಡೆಮಿಯ ಪ್ರಥಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮುಖಾಂತರ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.</p>.<p>ಕರ್ನಾಟಕ ಆಡಳಿತ ಸೇವೆಯಲ್ಲಿ ಕಾರ್ಯನಿರ್ವಹಿಸ ಬೇಕಾದರೆ ವಿದ್ಯಾರ್ಥಿಗಳು ತಾಳ್ಮೆಯಿಂದ, ಏಕಾಗ್ರತೆಯಿಂದ ವ್ಯಾಸಂಗ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಹಿಂದೆ ಗುರು ಇರಬೇಕು ಮುಂದೆ ಗುರಿ ಇರಬೇಕು ಎನ್ನುವ ಗಾದೆಯ ವಾಡಿಕೆಯಂತೆ ವಿದ್ಯಾರ್ಥಿಗಳು ಸಾಧಿಸುವ ಛಲ ದೊಂದಿಗೆ ಮುನ್ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಇತಿಹಾಸ ವಿಭಾಗದ ಪ್ರೊಫೆಸರ್ ಡಾ.ಸರ್ವೋದಯ ತಿಳಿಸಿದರು.</p>.<p>ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಓದುವಂತಹ ಇಚ್ಛಾಶಕ್ತಿ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಜೀವನದಲ್ಲಿ ಸಮಯಕ್ಕೆ ಗೌರವ ನೀಡಿದರೆ ಸಮಯ ಒಂದಲ್ಲ ಒಂದು ದಿನ ನಿಮಗೆ ಗೌರವ ನೀಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಸೂಚಿಸಿದರು.</p>.<p>ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ವಿವಿಧ ಕಾಲೇಜುಗಳ ಪ್ರಾಚಾರ್ಯರಾದ ಶರಣಗೌಡ , ರಾಜಪ್ಪ ಕೊನಿಮನಿ, ರಘುನಾಥ್ ರೆಡ್ಡಿ ಹಾಗೂ ಜವಹಾರ್ ಶಿಕ್ಷಣ ಸಂಸ್ಥೆಯ ಬಿಎಡ್ ಕಾಲೇಜಿನ ಪ್ರಾಚಾರ್ಯರಾದ ಇಕ್ಬಾಲ್ ಅವರಿಗೆ ಸಂಸ್ಥೆಯ ವತಿಯಿಂದ ಎ1 ಪ್ರತಿಭಾ ಪುರಸ್ಕಾರ ಸನ್ಮಾನ ಮಾಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಎ 1 ಕೆಎಎಸ್ ಕರಿಯರ್ ಅಕಾಡೆಮಿಯ ಪ್ರಥಮ ವರ್ಷದ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>