<p><strong>ಯಾದಗಿರಿ:</strong> ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿ, ಕೊಲೆಗೆ ಯತ್ನಿಸಿದ್ದ ಸಾಬೀತು ಆಗಿದ್ದರಿಂದ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮೂವರು ಅಪರಾಧಿಗಳಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.</p>.<p>ತಾಲ್ಲೂಕಿನ ವರ್ಕನಳ್ಳಿ ತಾಂಡಾದ ನಿವಾಸಿಗಳಾದ ಬಲರಾಮಸಿಂಗ್ ಪವಾರ್, ಯಂಕುಬಾಯಿ ಪವಾರ್ ಹಾಗೂ ಲಲಿತಾ ಪವಾರ್ ಶಿಕ್ಷೆಗೆ ಒಳಗಾದ ಅಪರಾಧಿಗಳು.</p>.<p>ಪ್ರಕರಣ ಒಂದರಲ್ಲಿ ವಕಾಲತ್ತು ನಡೆಸಿದ ವಕೀಲ ಗೋಪಾಲ ರಾಠೋಡ ಅವರು ಕೋರ್ಟ್ನಿಂದ ಹೊರಗೆ ತೆರಳಿದ್ದರು. ವಕೀಲರನ್ನು ತಡೆದು ನಿಲ್ಲಿಸಿದ ಈ ಮೂವರು, ನಿಂದಿಸಿ ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿದರು.</p>.<p>ಈ ಸಂಬಂಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್ಐ ಮಹಾಂತೇಶ ಸಜ್ಜನ್ ಅವರು ತನಿಖೆ ನಡೆಸಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.</p>.<p>ವಾದ–ಪ್ರತಿವಾದ ಆಲಿಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಈರಣ್ಣ ಅವರು ಬಲರಾಮಸಿಂಗ್, ಯಂಕುಬಾಯಿ ಹಾಗೂ ಲಲಿತಾಗೆ ವಿವಿಧ ಸೆಕ್ಷನ್ ಅಡಿ 6 ತಿಂಗಳು ಜೈಲು ಶಿಕ್ಷೆ ಮತ್ತು ಒಟ್ಟು ₹ 10,500 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.</p>.<p>ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಗುರುಲಿಂಗಪ್ಪ ಶ್ರೀಮಂತ ತೇಲಿ ಅವರು ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿ, ಕೊಲೆಗೆ ಯತ್ನಿಸಿದ್ದ ಸಾಬೀತು ಆಗಿದ್ದರಿಂದ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮೂವರು ಅಪರಾಧಿಗಳಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.</p>.<p>ತಾಲ್ಲೂಕಿನ ವರ್ಕನಳ್ಳಿ ತಾಂಡಾದ ನಿವಾಸಿಗಳಾದ ಬಲರಾಮಸಿಂಗ್ ಪವಾರ್, ಯಂಕುಬಾಯಿ ಪವಾರ್ ಹಾಗೂ ಲಲಿತಾ ಪವಾರ್ ಶಿಕ್ಷೆಗೆ ಒಳಗಾದ ಅಪರಾಧಿಗಳು.</p>.<p>ಪ್ರಕರಣ ಒಂದರಲ್ಲಿ ವಕಾಲತ್ತು ನಡೆಸಿದ ವಕೀಲ ಗೋಪಾಲ ರಾಠೋಡ ಅವರು ಕೋರ್ಟ್ನಿಂದ ಹೊರಗೆ ತೆರಳಿದ್ದರು. ವಕೀಲರನ್ನು ತಡೆದು ನಿಲ್ಲಿಸಿದ ಈ ಮೂವರು, ನಿಂದಿಸಿ ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿದರು.</p>.<p>ಈ ಸಂಬಂಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್ಐ ಮಹಾಂತೇಶ ಸಜ್ಜನ್ ಅವರು ತನಿಖೆ ನಡೆಸಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.</p>.<p>ವಾದ–ಪ್ರತಿವಾದ ಆಲಿಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಈರಣ್ಣ ಅವರು ಬಲರಾಮಸಿಂಗ್, ಯಂಕುಬಾಯಿ ಹಾಗೂ ಲಲಿತಾಗೆ ವಿವಿಧ ಸೆಕ್ಷನ್ ಅಡಿ 6 ತಿಂಗಳು ಜೈಲು ಶಿಕ್ಷೆ ಮತ್ತು ಒಟ್ಟು ₹ 10,500 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.</p>.<p>ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಗುರುಲಿಂಗಪ್ಪ ಶ್ರೀಮಂತ ತೇಲಿ ಅವರು ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>