<p><strong>ಕಕ್ಕೇರಾ:</strong> ಅತ್ಯಂತ ವೈಭವ, ಸಂಭ್ರಮದಿಂದ ಜರುಗಿದ ದಕ್ಷಿಣ ಕಾಶಿ ತಿಂಥಣಿ ಮೌನೇಶ್ವರ ಜಾತ್ರೆಯು ಸೋಮವಾರ ಮಧ್ಯರಾತ್ರಿ ಪಲ್ಲಕ್ಕಿಯು ಗುಹಾಪ್ರವೇಶ ಮಾಡುವುದರೊಂದಿಗೆ ಸಂಪನ್ನಗೊಂಡಿತು.</p>.<p>ಗುಹಾಪ್ರವೇಶದ ಸೋಮವಾರ ಅಸಂಖ್ಯಾತ ಭಕ್ತ ಸಮೂಹ ಆಗಮಿಸಿ ಧೂಳಗಾಯಿ ಸಮರ್ಪಿಸಿದರು. ಸುರಪುರದ ಕಾಳಮ್ಮದೇವಿ ಪಲ್ಲಕ್ಕಿ ಹಾಗೂ ಮೌನೇಶ್ವರ ಪಲ್ಲಕ್ಕಿಗಳು ಜೋಡಿಯಾಗಿ ಪುರವಂತರ ಸೇವೆ ಹಾಗೂ ವಾದ್ಯಮೇಳದೊಂದಿಗೆ ಬೆಳಿಗ್ಗೆ ಕೃಷ್ಣಾನದಿಗೆ ಗಂಗಾಸ್ನಾನಕ್ಕೆ ತೆರಳಿ, ಸಂಜೆ ಕೈಲಾಸಕಟ್ಟೆ ತಲುಪಿ ಮಹಾಸೇವಾಗೈದು, ನಂತರ 5 ಸುತ್ತು ದೇವಸ್ಥಾಕ್ಕೆ ಪ್ರದಕ್ಷಿಣೆ ಹಾಕಿದ ನಂತರ ಮೌನೇಶ್ವರ ಮೂರ್ತಿ ಗುಹಾಪ್ರವೇಶವಾಯಿತು. ಈ ವೇಳೆ ಭಕ್ತರಿಂದ ‘ಏಕ ಲಾಕ್ ಐಂ ಸಿ ಹಜಾರ್ ಪಾಚೋಪೀರ ಪೈಗಂಬರ್ ಜೀತಾ ಪೈಗಂಬರ್ ಮೌನೋದ್ದೀನ್ ಕಾಶೀಪತಿ ಗಂಗಾಧರ ಹರಹರ ಮಹಾದೇವ....’ ಎಂಬ ಜಯಘೋಷಗಳು ಮೊಳಗಿದವು.</p>.<p>ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಗೋವಾ, ರಾಜ್ಯಗಳಿಂದ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಇದರೊಂದಿಗೆ ಜಾತ್ರೆ ಸಂಪನ್ನಗೊಂಡಿತು.</p>.<p>ದೇವಸ್ಥಾನದ ಮೌನೇಶ್ವರಸ್ವಾಮಿ, ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಎಸ್ಪಿ ಪ್ಲಥ್ವಿಕ್ ಶಂಕರ್ ಹಾಗೂ ಸಹಾಯಕ ಆಯುಕ್ತ ಶ್ರೀಧರ್ ಗೋಟೂರ್ ಜಾತ್ರೋತ್ಸವ ಸಂದರ್ಭದಲ್ಲಿ ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಕ್ಕೇರಾ:</strong> ಅತ್ಯಂತ ವೈಭವ, ಸಂಭ್ರಮದಿಂದ ಜರುಗಿದ ದಕ್ಷಿಣ ಕಾಶಿ ತಿಂಥಣಿ ಮೌನೇಶ್ವರ ಜಾತ್ರೆಯು ಸೋಮವಾರ ಮಧ್ಯರಾತ್ರಿ ಪಲ್ಲಕ್ಕಿಯು ಗುಹಾಪ್ರವೇಶ ಮಾಡುವುದರೊಂದಿಗೆ ಸಂಪನ್ನಗೊಂಡಿತು.</p>.<p>ಗುಹಾಪ್ರವೇಶದ ಸೋಮವಾರ ಅಸಂಖ್ಯಾತ ಭಕ್ತ ಸಮೂಹ ಆಗಮಿಸಿ ಧೂಳಗಾಯಿ ಸಮರ್ಪಿಸಿದರು. ಸುರಪುರದ ಕಾಳಮ್ಮದೇವಿ ಪಲ್ಲಕ್ಕಿ ಹಾಗೂ ಮೌನೇಶ್ವರ ಪಲ್ಲಕ್ಕಿಗಳು ಜೋಡಿಯಾಗಿ ಪುರವಂತರ ಸೇವೆ ಹಾಗೂ ವಾದ್ಯಮೇಳದೊಂದಿಗೆ ಬೆಳಿಗ್ಗೆ ಕೃಷ್ಣಾನದಿಗೆ ಗಂಗಾಸ್ನಾನಕ್ಕೆ ತೆರಳಿ, ಸಂಜೆ ಕೈಲಾಸಕಟ್ಟೆ ತಲುಪಿ ಮಹಾಸೇವಾಗೈದು, ನಂತರ 5 ಸುತ್ತು ದೇವಸ್ಥಾಕ್ಕೆ ಪ್ರದಕ್ಷಿಣೆ ಹಾಕಿದ ನಂತರ ಮೌನೇಶ್ವರ ಮೂರ್ತಿ ಗುಹಾಪ್ರವೇಶವಾಯಿತು. ಈ ವೇಳೆ ಭಕ್ತರಿಂದ ‘ಏಕ ಲಾಕ್ ಐಂ ಸಿ ಹಜಾರ್ ಪಾಚೋಪೀರ ಪೈಗಂಬರ್ ಜೀತಾ ಪೈಗಂಬರ್ ಮೌನೋದ್ದೀನ್ ಕಾಶೀಪತಿ ಗಂಗಾಧರ ಹರಹರ ಮಹಾದೇವ....’ ಎಂಬ ಜಯಘೋಷಗಳು ಮೊಳಗಿದವು.</p>.<p>ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಗೋವಾ, ರಾಜ್ಯಗಳಿಂದ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಇದರೊಂದಿಗೆ ಜಾತ್ರೆ ಸಂಪನ್ನಗೊಂಡಿತು.</p>.<p>ದೇವಸ್ಥಾನದ ಮೌನೇಶ್ವರಸ್ವಾಮಿ, ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಎಸ್ಪಿ ಪ್ಲಥ್ವಿಕ್ ಶಂಕರ್ ಹಾಗೂ ಸಹಾಯಕ ಆಯುಕ್ತ ಶ್ರೀಧರ್ ಗೋಟೂರ್ ಜಾತ್ರೋತ್ಸವ ಸಂದರ್ಭದಲ್ಲಿ ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>