<p><strong>ಗುರುಮಠಕಲ್</strong> (ಯಾದಗಿರಿ ಜಿಲ್ಲೆ): ‘ನನ್ನ ಮತಕ್ಷೇತ್ರದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳ ನಡೆ ಮತ್ತು ಅವರ ಭ್ರಷ್ಟಾಚಾರದಿಂದ ಬೇಸತ್ತು ರಾಜೀನಾಮೆ ನೀಡಲು ಮುಂದಾಗಿದ್ದೆ’ ಎಂದು ಶಾಸಕ ಶರಣಗೌಡ ಕಂದಕೂರ ಅಸಮಾಧಾನ ಹೊರಹಾಕಿದರು.</p>.<p>ಗುರುವಾರ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ವಿರುದ್ಧ ಹರಿಹಾಯ್ದ ಅವರು, ‘ರಾಜೀನಾಮೆ ಪತ್ರ ನೀಡಲು ಸ್ಪೀಕರ್ ಅವರ ಸಮಯ ಕೇಳಿದ್ದೆ’ ಎಂದು ತಿಳಿಸಿದರು.</p>.<p>‘ಗುರುಮಠಕಲ್ ಪೊಲೀಸರು ಭ್ರಷ್ಟಾಚಾರದ ರೇಟ್ ಕಾರ್ಡ್ ಮಾಡಿಕೊಂಡಿದ್ದಾರೆ. ಈ ಕುರಿತು ಡಿವೈಎಸ್ಪಿ ಅವರಿಗೆ ವಾರದಲ್ಲಿ ಹತ್ತು ಬಾರಿ ಕರೆ ಮಾಡಿ ದೂರಿದ್ದೇನೆ. ಏನು ಕ್ರಮ ಕೈಗೊಂಡಿದ್ದೀರಿ’ ಎಂದು ತರಾಟೆಗೆ ತೆಗೆದುಕೊಂಡರು.</p>.<p>ಸಾಮಾಜಿಕ ಕಾರ್ಯಕರ್ತ ಸಂಜು ಅಳೆಗಾರ ಅವರು, ಮರಳು ದಂದೆ, ಜೂಜಾಟ, ಮಟ್ಕಾ, ಟ್ರಾಫಿಕ್ನಲ್ಲಿ ರಸೀದಿ ನೀಡದೇ ಹಣ ವಸೂಲಿ ಮಾಡುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ‘ನಾನೂ ಹಲವು ಬಾರಿ ಗುರುಮಠಕಲ್ ಪೊಲೀಸ್ ಅಧಿಕಾರಿಗಳ ಬಗ್ಗೆ ಡಿವೈಎಸ್ಪಿಗೆ ದೂರು ನೀಡಿದ್ದೆ. ಅವರ ಮೇಲೆ ಏಕೆ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಪ್ರಶ್ನಿಸಿದರು.</p>.<p>‘ನಮ್ಮ ಕ್ಷೇತ್ರದಲ್ಲಿ ಪೊಲೀಸ್ ಇಲಾಖೆಯೇ ಭ್ರಷ್ಟಾಚಾರದ ಕೇಂದ್ರವಾಗಿದೆ. ನನಗೆ ಪೊಲೀಸ್ ಠಾಣೆ ಮತ್ತು ಅಧಿಕಾರಿಗಳ ನಡೆಯೇ ದೊಡ್ಡ ಸಮಸ್ಯೆಯಾಗಿದೆ. ಇಲಾಖೆಯ ನಡತೆಗೆ ಬೇಸತ್ತಿದ್ದೇನೆ. ಇಲಾಖೆ ಕುರಿತು ಈ ರೀತಿ ಮಾತನಾಡುವಾಗ ನನಗೂ ನೋವಾಗುತ್ತದೆ. ಆದರೆ, ಸಮಸ್ಯೆಯ ತೀವ್ರತೆಯ ನೋವು ಅದಕ್ಕಿಂತಲೂ ಹೆಚ್ಚಿನದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುರುಮಠಕಲ್</strong> (ಯಾದಗಿರಿ ಜಿಲ್ಲೆ): ‘ನನ್ನ ಮತಕ್ಷೇತ್ರದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳ ನಡೆ ಮತ್ತು ಅವರ ಭ್ರಷ್ಟಾಚಾರದಿಂದ ಬೇಸತ್ತು ರಾಜೀನಾಮೆ ನೀಡಲು ಮುಂದಾಗಿದ್ದೆ’ ಎಂದು ಶಾಸಕ ಶರಣಗೌಡ ಕಂದಕೂರ ಅಸಮಾಧಾನ ಹೊರಹಾಕಿದರು.</p>.<p>ಗುರುವಾರ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ವಿರುದ್ಧ ಹರಿಹಾಯ್ದ ಅವರು, ‘ರಾಜೀನಾಮೆ ಪತ್ರ ನೀಡಲು ಸ್ಪೀಕರ್ ಅವರ ಸಮಯ ಕೇಳಿದ್ದೆ’ ಎಂದು ತಿಳಿಸಿದರು.</p>.<p>‘ಗುರುಮಠಕಲ್ ಪೊಲೀಸರು ಭ್ರಷ್ಟಾಚಾರದ ರೇಟ್ ಕಾರ್ಡ್ ಮಾಡಿಕೊಂಡಿದ್ದಾರೆ. ಈ ಕುರಿತು ಡಿವೈಎಸ್ಪಿ ಅವರಿಗೆ ವಾರದಲ್ಲಿ ಹತ್ತು ಬಾರಿ ಕರೆ ಮಾಡಿ ದೂರಿದ್ದೇನೆ. ಏನು ಕ್ರಮ ಕೈಗೊಂಡಿದ್ದೀರಿ’ ಎಂದು ತರಾಟೆಗೆ ತೆಗೆದುಕೊಂಡರು.</p>.<p>ಸಾಮಾಜಿಕ ಕಾರ್ಯಕರ್ತ ಸಂಜು ಅಳೆಗಾರ ಅವರು, ಮರಳು ದಂದೆ, ಜೂಜಾಟ, ಮಟ್ಕಾ, ಟ್ರಾಫಿಕ್ನಲ್ಲಿ ರಸೀದಿ ನೀಡದೇ ಹಣ ವಸೂಲಿ ಮಾಡುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ‘ನಾನೂ ಹಲವು ಬಾರಿ ಗುರುಮಠಕಲ್ ಪೊಲೀಸ್ ಅಧಿಕಾರಿಗಳ ಬಗ್ಗೆ ಡಿವೈಎಸ್ಪಿಗೆ ದೂರು ನೀಡಿದ್ದೆ. ಅವರ ಮೇಲೆ ಏಕೆ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಪ್ರಶ್ನಿಸಿದರು.</p>.<p>‘ನಮ್ಮ ಕ್ಷೇತ್ರದಲ್ಲಿ ಪೊಲೀಸ್ ಇಲಾಖೆಯೇ ಭ್ರಷ್ಟಾಚಾರದ ಕೇಂದ್ರವಾಗಿದೆ. ನನಗೆ ಪೊಲೀಸ್ ಠಾಣೆ ಮತ್ತು ಅಧಿಕಾರಿಗಳ ನಡೆಯೇ ದೊಡ್ಡ ಸಮಸ್ಯೆಯಾಗಿದೆ. ಇಲಾಖೆಯ ನಡತೆಗೆ ಬೇಸತ್ತಿದ್ದೇನೆ. ಇಲಾಖೆ ಕುರಿತು ಈ ರೀತಿ ಮಾತನಾಡುವಾಗ ನನಗೂ ನೋವಾಗುತ್ತದೆ. ಆದರೆ, ಸಮಸ್ಯೆಯ ತೀವ್ರತೆಯ ನೋವು ಅದಕ್ಕಿಂತಲೂ ಹೆಚ್ಚಿನದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>