<p><strong>ಕೆಂಭಾವಿ:</strong> ಬೇಸಿಗೆ ಸಮಯದಲ್ಲಿ ಜನ ಸಾಮಾನ್ಯರು ಮಾತ್ರವಲ್ಲದೆ ಜಾನುವಾರುಗಳು, ಪಕ್ಷಿಗಳು ಕೂಡ ನೀರಿಗಾಗಿ ಪರಿತಪಿಸುತ್ತಿವೆ. ಜಾನುವಾರುಗಳಿಗೆ ಅನುಕೂಲವಾಗಲಿ ಎಂದು ಸ್ಥಳೀಯರಾದ ಕಿರಣ ಜಕರೆಡ್ಡಿ ಅವರು ತಮ್ಮ ಫಾರ್ಮ್ಹೌಸ್ ಮುಂದೆ ನೀರಿನ ತೊಟ್ಟಿಗಳನ್ನು ನಿರ್ಮಿಸಿ ಪ್ರಾಣಿ, ಪಕ್ಷಿಗಳಿಗೆ ಜೀವಜಲ ಪೂರೈಸುತ್ತಿರುವುದು ಪ್ರಶಂಸೆಗೆ ಪಾತ್ರವಾಗಿದೆ.</p>.<p>ಕಳೆದ ಎರಡು ವರ್ಷಗಳ ಹಿಂದೆ ಪಟ್ಟಣ ಹೊರವಲಯದಲ್ಲಿರುವ ಕೆಂಭಾವಿಯಿಂದ ನಗನೂರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ತಮ್ಮ ಜಕರಡ್ಡಿ ಫಾರ್ಮಹೌಸ್ ದ್ರಾಕ್ಷಿ ತೋಟದ ಜಮೀನಿನ ಬಳಿ ತಮ್ಮ ಸ್ವಂತ ಖರ್ಚಿನಿಂದ ನೀರಿನ ತೊಟ್ಟಿ ನಿರ್ಮಿಸಿ ನಿತ್ಯ ನೂರಾರು ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುತ್ತಿದ್ದಾರೆ.</p>.<p>ಅಲ್ಲದೆ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೂ ಅರವಟಿಕೆ ಇಡುವ ಮೂಲಕ ಜನರ ದಾಹವನ್ನು ನೀಗಿಸುತ್ತಿದ್ದಾರೆ.</p>.<p>ಮನುಷ್ಯ, ಪ್ರಾಣಿ, ಪಕ್ಷಿಗಳು ನೆಮ್ಮದಿಯಿಂದ ಬದುಕಬೇಕಾದರೆ ಗಿಡ ಮರಗಳನ್ನು ಹೆಚ್ಚು ಹೆಚ್ಚಾಗಿ ಬೆಳೆಸಿ ಉಳಿಸಬೇಕಾಗಿದೆ ಎನ್ನುತ್ತಾರೆ ಡಾ.ಕಿರಣ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ:</strong> ಬೇಸಿಗೆ ಸಮಯದಲ್ಲಿ ಜನ ಸಾಮಾನ್ಯರು ಮಾತ್ರವಲ್ಲದೆ ಜಾನುವಾರುಗಳು, ಪಕ್ಷಿಗಳು ಕೂಡ ನೀರಿಗಾಗಿ ಪರಿತಪಿಸುತ್ತಿವೆ. ಜಾನುವಾರುಗಳಿಗೆ ಅನುಕೂಲವಾಗಲಿ ಎಂದು ಸ್ಥಳೀಯರಾದ ಕಿರಣ ಜಕರೆಡ್ಡಿ ಅವರು ತಮ್ಮ ಫಾರ್ಮ್ಹೌಸ್ ಮುಂದೆ ನೀರಿನ ತೊಟ್ಟಿಗಳನ್ನು ನಿರ್ಮಿಸಿ ಪ್ರಾಣಿ, ಪಕ್ಷಿಗಳಿಗೆ ಜೀವಜಲ ಪೂರೈಸುತ್ತಿರುವುದು ಪ್ರಶಂಸೆಗೆ ಪಾತ್ರವಾಗಿದೆ.</p>.<p>ಕಳೆದ ಎರಡು ವರ್ಷಗಳ ಹಿಂದೆ ಪಟ್ಟಣ ಹೊರವಲಯದಲ್ಲಿರುವ ಕೆಂಭಾವಿಯಿಂದ ನಗನೂರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ತಮ್ಮ ಜಕರಡ್ಡಿ ಫಾರ್ಮಹೌಸ್ ದ್ರಾಕ್ಷಿ ತೋಟದ ಜಮೀನಿನ ಬಳಿ ತಮ್ಮ ಸ್ವಂತ ಖರ್ಚಿನಿಂದ ನೀರಿನ ತೊಟ್ಟಿ ನಿರ್ಮಿಸಿ ನಿತ್ಯ ನೂರಾರು ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುತ್ತಿದ್ದಾರೆ.</p>.<p>ಅಲ್ಲದೆ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೂ ಅರವಟಿಕೆ ಇಡುವ ಮೂಲಕ ಜನರ ದಾಹವನ್ನು ನೀಗಿಸುತ್ತಿದ್ದಾರೆ.</p>.<p>ಮನುಷ್ಯ, ಪ್ರಾಣಿ, ಪಕ್ಷಿಗಳು ನೆಮ್ಮದಿಯಿಂದ ಬದುಕಬೇಕಾದರೆ ಗಿಡ ಮರಗಳನ್ನು ಹೆಚ್ಚು ಹೆಚ್ಚಾಗಿ ಬೆಳೆಸಿ ಉಳಿಸಬೇಕಾಗಿದೆ ಎನ್ನುತ್ತಾರೆ ಡಾ.ಕಿರಣ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>