ಕೆಂಭಾವಿ: ಬೇಸಿಗೆ ಸಮಯದಲ್ಲಿ ಜನ ಸಾಮಾನ್ಯರು ಮಾತ್ರವಲ್ಲದೆ ಜಾನುವಾರುಗಳು, ಪಕ್ಷಿಗಳು ಕೂಡ ನೀರಿಗಾಗಿ ಪರಿತಪಿಸುತ್ತಿವೆ. ಜಾನುವಾರುಗಳಿಗೆ ಅನುಕೂಲವಾಗಲಿ ಎಂದು ಸ್ಥಳೀಯರಾದ ಕಿರಣ ಜಕರೆಡ್ಡಿ ಅವರು ತಮ್ಮ ಫಾರ್ಮ್ಹೌಸ್ ಮುಂದೆ ನೀರಿನ ತೊಟ್ಟಿಗಳನ್ನು ನಿರ್ಮಿಸಿ ಪ್ರಾಣಿ, ಪಕ್ಷಿಗಳಿಗೆ ಜೀವಜಲ ಪೂರೈಸುತ್ತಿರುವುದು ಪ್ರಶಂಸೆಗೆ ಪಾತ್ರವಾಗಿದೆ.