ಈ ಕುರಿತು ಪಿಡಿಒ ಮಲ್ಲಪ್ಪನವರನ್ನು ಸಂಪರ್ಕಿಸಿದಾಗ, 'ನೀರು ಸೋರುವುದನ್ನು ನಿಲ್ಲಿಸುವ ಕೆಲಸ ಆರಂಭಿಸಲಾಗಿದೆ, ಶೌಚಾಲಯಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದ್ದೇವೆ, ಮತ್ತೊಮ್ಮೆ ಖುದ್ದಾಗಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತೇನೆ' ಎಂದು ಪ್ರತಿಕ್ರಿಯಿಸಿದರು.