ಇಲಾಖೆಗಳ ನಡುವೆ ಸಮನ್ವಯ ಕೊರತೆ: ಜಲಪಾತವನ್ನು ಪ್ರವಾಸಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸುವ ಹೇಳಿಕೆಗಳನ್ನು ಸರ್ಕಾರ ನೀಡುತ್ತಲೇ ಇದೆ. ಈ ಮೊದಲು ₹1 ಕೋಟಿ ಅನುದಾನ ಒದಗಿಸಲಾಗಿತ್ತು. ಆದರೆ, ಪ್ರವಾಸೋದ್ಯಮ, ಅರಣ್ಯ, ಕಂದಾಯ ಹಾಗೂ ಪಂಚಾಯತ್ ರಾಜ್ ಇಲಾಖೆಗಳ ನಡುವೆ ಸಮನ್ವಯ ಕೊರತೆಯಿಂದ ಯಾವ ಕೆಲಸಗಳೂ ಸಾಗುತ್ತಿಲ್ಲ.