‘ಟ್ರ್ಯಾಕ್ಟರ್ನಲ್ಲಿ ಪ್ರಯಾಣಿಸುತ್ತಿದ್ದ 15 ಜನರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಕಲಬುರಗಿಯ ಜಿಮ್ಸ್ಗೆ ಶಿಫಾರಸು ಮಾಡಲಾಗುವುದು. ಉಳಿದವರಿಗೆ ಇಲ್ಲಿಯೇ ಚಿಕಿತ್ಸೆ ನೀಡಲಾಗುವುದು. ಟ್ರ್ಯಾಕ್ಟರ್ನಲ್ಲಿ ಅಧಿಕ ಪ್ರಯಾಣಿಕರನ್ನು ಕರೆಯೊಯ್ಯುವುದು ಘಟನೆಗೆ ಕಾರಣವಾಗಿದೆ. ಟ್ರ್ಯಾಕ್ಟರ್ ಮಾಲಿಕ, ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಧಿಕ ಪ್ರಯಾಣಿಕರನ್ನು ಕರೆದೊಯ್ಯುವ ಕುರಿತು ಪೊಲೀಸ್, ಆರ್ಟಿಒ ಅಧಿಕಾರಿಗಳಿಗೆ ನಿಯಂತ್ರಣಕ್ಕೆ ಸೂಚಿಸಲಾಗುವುದು’ ಎಂದು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ತಿಳಿಸಿದರು.